News Karnataka Kannada
Monday, May 13 2024
ಮಂಗಳೂರು

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ: ಮನೆಗಳಿಗೆ ಹಾನಿ

Heavy rains
Photo Credit : News Kannada

ಬೆಳ್ತಂಗಡಿ: ತಾಲೂಕಿನ ವಿವಿದೆಡೆ ಗಾಳಿ ಸಹಿತ ಧಾರಕಾರ ಮಳೆಯಾಗುತ್ತಿದ್ದು ಹಲವಡೆ ಹಸನಿಯಾಗಿದೆ.ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಜೀವನ ಕಷ್ಟಕರವಾಗಿದೆ. ತೆಂಗು,ಅಡಿಕೆಮರ ಹಾಗೂ ಇತರ ಮರಗಳು ಧರೆಗುರುಳಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ‌.ಮಳೆಯ ಆರ್ಭಟಕ್ಕೆ ಮನೆಗಳ ಹಂಚುಗಳು ಮತ್ತು ಮೇಲ್ಛಾವಣಿಗಳು ಹಾರಿ ಹೋಗಿವೆ.

ಪಡಂಗಡಿ ಗ್ರಾಮದ ರಿಚರ್ಡ್ ಅವರ ಮನೆಗೆ ಗುಡ್ಡ ಕುಸಿದು ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.ಇಂದಬೆಟ್ಟು ಗ್ರಾಮದ ಜಾಕೋಬ್ ಮೊನಿಸ್ ರವರ ವಾಸ್ತವ್ಯದ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದು ಗೋಡೆ ಬಿರುಕು ಬಿಟ್ಟಿದೆ.ಮೊಗ್ರು ಗ್ರಾಮದ ಪರಕ್ಕಾಜೆ ಎಂಬಲ್ಲಿ ಶೀನಪ್ಪ ಗೌಡ ರವರ ಮನೆಯ ಪಕ್ಕದಲ್ಲಿರುವ ದನದ ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಾಲಾಡಿ ಗ್ರಾಮದ ಅಶೋಕ್ ಶೆಣೈ ಮನೆಯ ಕಂಪೌಂಡ್ ಬಿದ್ದು ಸಮಸ್ಯೆ ಎದುರಾಗಿದೆ. ಪಜಿರಡ್ಕದಲ್ಲಿ ಎಸ್.ಸಿ ಕಾಲೋನಿ ಶಂಕರರವರ ಮನೆ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಯಾದ ಘಟನೆ ಸಂಭವಿಸಿದೆ. ಪಡಂಗಡಿ ಬಾಬು ರವರ ದನದ ಹಟ್ಟಿಯ ಶೀಟ್ ಗಾಳಿಗೆ ಹಾರಿಹೋಗಿದೆ ಹಾಗೂ ಕಲ್ಯಾಣಿಯವರ ಕೊಟ್ಟಿಗೆಗೆ ಗಾಳಿ ಮಳೆಯಿಂದ ತೊಂದರೆಯಾಗಿದೆ.

ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಕಂರ್ಬಿತ್ತಿಲ್ ಶೇಖರ್ ಶೆಟ್ಟಿಯವರ ಹೊಸಮನೆಗೆ ಗುಡ್ಡ ಕುಸಿದು ಹಾನಿ. ಮಾಲಾಡಿ ಜನತಾ ಕಾಲೋನಿ ಶಕುಂತಾಳರವರ ವಾಸದ ಮನೆಯ ಗೋಡೆ ಕುಸಿದು ಬಿದ್ದಿದೆ‌. ವೇಣೂರಿನಲ್ಲಿ ಮೈಮುನಾ ರವರ ಮನೆಗೆ ಮರ ಬಿದ್ದು ಹಂಚು ಬಿದ್ದು ವಾಸ ಮಾಡಲು ತೊಂದರೆಯಾಗಿದೆ.ಸೋಣಂದೂರು ಗ್ರಾಮದ ಸಬರಬೈಲು ಅಣ್ಣಿಮೂಲ್ಯರ ಶೌಚಾಲಯದ ಗೋಡೆ ಕುದಿದು ಬಿದ್ದಿದೆ.ಮಿತ್ತಬಾಗಿಲು ಗ್ರಾಮದ ಕೆ. ಅಬೂಬಕ್ಕರ್ ರವರ ವಾಸ್ತವ್ಯದ ಮನೆಯ ಮೇಲ್ಛಾವಣಿ ಗಾಳಿ ಮಳೆಗೆ ಕುಸಿದು ಬಿದ್ದು ಮನೆಯು ಹಾನಿಗೊಂಡಿದೆ.

ಗ್ರಾಮಾಂತರ ಪ್ರದೇಶದ ಹಲವು ಕಡೆಗಳಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು ನೀರು ತೋಟಕ್ಕೆ ನುಗ್ಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಸೂಳಬೆಟ್ಟು ಪಲ್ಗುಣಿ ನದಿಯ ಪಕ್ಕ ಅಡಿಕೆ ತೋಟಗಳಿಗೆ ನೀರು ನುಗ್ಗಿ ನಷ್ಟ ಉಂಟಾಗಿದೆ. ಪೆರಾಡಿ ಗ್ರಾಮದ ಪಂಬುದೊಟ್ಟು ಎಂಬಲ್ಲಿ ತೋಡಿನ ನೀರು ಪಕ್ಕದ ಗದ್ದೆ ಮತ್ತು ತೋಟಕ್ಕೆ ನುಗ್ಗಿ ರೈತರಿಗೆ ವ್ಯಾಪಕ ನಷ್ಟ ಉಂಟಾಗಿರುತ್ತದೆ.ಹಚ್ಚಾಡಿ, ಕೊಪ್ಪದ ಗಂಡಿ ಕಿಲ್ಲೂರು ಸಂಪರ್ಕ ಸೇತುವೆ ಹಾಗೂ ಇತರ ನದಿಗಳಲ್ಲಿ ನೀರಿನ ಮಟ್ಟ ಹೆಚ್ವಿದೆ. ಇನ್ನು ಘಟನ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಹತೋಟಿಗೆ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು