ಮಂಗಳೂರು: ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ ಜ.22 ರಂದು ನಡೆಯಲಿದೆ. ಇದರ ಪೂರ್ವಭಾವಿಯಾಗಿ ರಾಮಮಂದಿರ ಮಂತ್ರಾಕ್ಷತೆ ವಿತರಣಾ ಸಂಚಾಲಕನ ಮೇಲೆ ಹಲ್ಲೆ ನಡೆದಿದೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಮುಂಡೂರು ಎಂಬಲ್ಲಿ ನಡೆದಿದೆ.
ಮುಂಡೂರು ಗ್ರಾಮದಲ್ಲಿ ಅಕ್ಷತೆ ಹಂಚುವ ಹೊಣೆ ಹೊತ್ತಿದ್ದ ಸಂತೋಷ್ ಮೇಲೆ ಹಲ್ಲೆ ಮಾಡಿದ್ದಾರೆ. ಸ್ಥಳೀಯ ನಿವಾಸಿ ಧನಂಜಯ್ ಮತ್ತು ಆತನ ಸಹಚರರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ತಡೆಯಲು ಬಂದ ಸಂತೋಷ್ ತಾಯಿ ಮೇಲೂ ಸಹ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.