ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎ.29 ರಂದು ಉಡುಪಿ ಹಾಗೂ ಮಂಗಳೂರಿಗೆ ಭೇಟಿ ನೀಡಲಿದ್ದು ರೋಡ್ ಶೋ ಹಾಗೂ ಪ್ರಚಾರ ಸಭೆ ಗಳಲ್ಲಿ ಪಾಲ್ಗೊಳ್ಳುವರು.
ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನ 2.20ಕ್ಕೆ ಹೆಲಿ ಕಾಪ್ಟರ್ ಮೂಲಕ ಆದಿಉಡುಪಿಗೆ ಆಗಮಿಸಿ, ಅಲ್ಲಿಂದ ಕಟಪಾಡಿಯ ಗ್ರೀನ್ವ್ಯಾಲಿ ಮೈದಾನಕ್ಕೆ ರಸ್ತೆ ಮೂಲಕ ತೆರಳುವರು. ಅಲ್ಲಿ ಕಾಪು ಮತ್ತು ಉಡುಪಿ ಕ್ಷೇತ್ರದ ಕಾರ್ಯಕರ್ತರು ಹಾಗೂ ಬೆಂಬಲಿಗರ ಸಮಾವೇಶದಲ್ಲಿ ಭಾಷಣ ಮಾಡುವರು.
ಬಳಿಕ ಮತ್ತೆ ಆದಿಉಡುಪಿಗೆ ಬಂದು ಹೆಲಿ ಕಾಪ್ಟರ್ ಮೂಲಕ ಬೈಂದೂರಿಗೆ ಹೊರಡುವರು. ಬೈಂದೂರು ಕ್ಷೇತ್ರದ ಸಿದ್ದಾಪುರದಲ್ಲಿ ಸಂಜೆ 4 ಗಂಟೆಗೆ ರೋಡ್ ಶೋ ನಡೆಸಿ, ಅನಂತರ ಸಿದ್ದಾಪುರ ವೃತ್ತದಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವರು. ಈ ಎರಡು ಕಾರ್ಯಕ್ರಮಗಳಿಗೂ ಜಿಲ್ಲಾ ಬಿಜೆಪಿ ಸಿದ್ಧತೆ ನಡೆಸಿದೆ.
ಸಂಜೆ ಮಂಗಳೂರಿಗೆ: ಸಂಜೆ 5.25ಕ್ಕೆ ಮೇರಿ ಹಿಲ್ ಹೆಲಿಪ್ಯಾಡ್ಗೆ ಆಗ ಮಿಸಲಿದ್ದು, 5.40 ರಿಂದ 6.40 ರವರೆಗೆ ಪುರಭವನದಿಂದ ನವಭಾರತ ವೃತ್ತದವರೆಗೆ ರೋಡ್ ಶೋ ದಲ್ಲಿ ಪಾಲ್ಗೊಳ್ಳುವರು. ಬಳಿಕ ಕೊಂಚ ವಿಶ್ರಾಂತಿ ಪಡೆದು, 7 ರಿಂದ 8 ರವರೆಗೆ ಪಕ್ಷದ ಸಭೆ ನಡೆಸುವರು. 8.50ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊಸ ದಿಲ್ಲಿಗೆ ತೆರಳುವರು. ಈ ಹಿಂದೆ ಎ. 27 ಕ್ಕೆ ಕಾಯಕ್ರಮ ನಿಗದಿಯಾಗಿತ್ತು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…