News Karnataka Kannada
Tuesday, April 30 2024
ಮಂಗಳೂರು

ಐಟಿ ದಾಳಿ ರಾಜಕೀಯ ಪ್ರೇರಿತ: ರಾಜ್ಯಸಭಾ ಸದಸ್ಯ ನಾಸಿರ್‌ ಹುಸೇನ್‌

I-T raids politically motivated: Rajya Sabha MP Nasir Hussain
Photo Credit : News Kannada

ಮಂಗಳೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ರಾಜ್ಯಸಭೆ ಸದಸ್ಯ ಡಾ. ನಾಸಿರ್ ಹುಸೇನ್ ಹೇಳಿದ್ದಾರೆ. ಬಹುತೇಕ ಸರ್ವೇ ವರದಿಗಳಲ್ಲಿ ಕಾಂಗ್ರೆಸ್ ಪರ ಜನರ ಒಲವು ಕಂಡು ಬಂದಿದೆ.

ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುರಿತು ಬಿಜೆಪಿಗೆ ಕಾಳಜಿ ಇಲ್ಲ. ಕೋಮು ದ್ವೇಷ, ಹಿಂಸೆಯನ್ನು ಸಹಿಸಲ್ಲ ಎಂದು ಮುಖ್ಯಮಂತ್ರಿ ಸೇರಿದಂತೆ ಉಸ್ತುವಾರಿ ಸಚಿವರು ಹೇಳಿದ್ದಾರೆ. ದ್ವೇಷ, ಹಿಂಸೆ ಮುಂದುವರಿದಲ್ಲಿ ಶಾಂತಿ ಇಲ್ಲದೇ ಇದ್ದಲ್ಲಿ ಇಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ. ಹೂಡಿಕೆದಾರರು ಹೂಡಿಕೆ ಮಾಡಲು ಮುಂದೆ ಬರುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮಾತ್ರ ಅಭಿವೃದ್ಧಿ, ಶಾಂತಿ ಸಾಧ್ಯ . ಇಂಡಿಯಾ ಅಲಯನ್ಸ್ ನಿಂದ ಬಂದ ಬಳಿಕ ಮೋದಿ, ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ.

ಮುಂಬರುವ ನಾವು ಪಂಚ ರಾಜ್ಯ, ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಹುಸೇನ್‌ ಹೇಳಿದರು. ನಲ್ವತ್ತು ಪರ್ಸೆಂಟ್ ಕಮಿಷನ್ ಕುರಿತು ಕಾಂಗ್ರೆಸ್ ಆರೋಪ ಮಾಡಿದ್ದಲ್ಲ, ಗುತ್ತಿಗೆದಾರರು ಮಾಡಿರುವುದು. ಬಿಜೆಪಿಯವರು ಐಟಿ ದಾಳಿ ಮಾಡಿಸುತ್ತಿದ್ದಾರೆ. ಆದರೆ ಗುತ್ತಿಗೆದಾರರು ಯಾರ ಜೊತೆಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ನಮಗೇನು ಸಂಬಂಧವಿಲ್ಲ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು