ಮಂಗಳೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ರಾಜ್ಯಸಭೆ ಸದಸ್ಯ ಡಾ. ನಾಸಿರ್ ಹುಸೇನ್ ಹೇಳಿದ್ದಾರೆ. ಬಹುತೇಕ ಸರ್ವೇ ವರದಿಗಳಲ್ಲಿ ಕಾಂಗ್ರೆಸ್ ಪರ ಜನರ ಒಲವು ಕಂಡು ಬಂದಿದೆ.
ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುರಿತು ಬಿಜೆಪಿಗೆ ಕಾಳಜಿ ಇಲ್ಲ. ಕೋಮು ದ್ವೇಷ, ಹಿಂಸೆಯನ್ನು ಸಹಿಸಲ್ಲ ಎಂದು ಮುಖ್ಯಮಂತ್ರಿ ಸೇರಿದಂತೆ ಉಸ್ತುವಾರಿ ಸಚಿವರು ಹೇಳಿದ್ದಾರೆ. ದ್ವೇಷ, ಹಿಂಸೆ ಮುಂದುವರಿದಲ್ಲಿ ಶಾಂತಿ ಇಲ್ಲದೇ ಇದ್ದಲ್ಲಿ ಇಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ. ಹೂಡಿಕೆದಾರರು ಹೂಡಿಕೆ ಮಾಡಲು ಮುಂದೆ ಬರುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮಾತ್ರ ಅಭಿವೃದ್ಧಿ, ಶಾಂತಿ ಸಾಧ್ಯ . ಇಂಡಿಯಾ ಅಲಯನ್ಸ್ ನಿಂದ ಬಂದ ಬಳಿಕ ಮೋದಿ, ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ.
ಮುಂಬರುವ ನಾವು ಪಂಚ ರಾಜ್ಯ, ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಹುಸೇನ್ ಹೇಳಿದರು. ನಲ್ವತ್ತು ಪರ್ಸೆಂಟ್ ಕಮಿಷನ್ ಕುರಿತು ಕಾಂಗ್ರೆಸ್ ಆರೋಪ ಮಾಡಿದ್ದಲ್ಲ, ಗುತ್ತಿಗೆದಾರರು ಮಾಡಿರುವುದು. ಬಿಜೆಪಿಯವರು ಐಟಿ ದಾಳಿ ಮಾಡಿಸುತ್ತಿದ್ದಾರೆ. ಆದರೆ ಗುತ್ತಿಗೆದಾರರು ಯಾರ ಜೊತೆಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ನಮಗೇನು ಸಂಬಂಧವಿಲ್ಲ ಎಂದು ಹೇಳಿದರು.