News Karnataka Kannada
Thursday, May 09 2024
ಮಂಗಳೂರು

ಕುಸಿದು ಬಿದ್ದು ಮೃತಪಟ್ಟ ದೈವ ನರ್ತಕ: ಮಕ್ಕಳಿಗೆ ದೀಕ್ಷೆ ಬೂಳ್ಯ

New Project 2024 01 27t124020.665
Photo Credit : News Kannada

ಮಂಗಳೂರು: ಇತ್ತೀಚೆಗೆ ಕೆಲವು ತಿಂಗಳ ಹಿಂದೆ ದೈವದ ನರ್ತನ ಮಾಡುತ್ತಿದ್ದ ಸಂದರ್ಭದಲ್ಲೇ ದೈವ ನರ್ತಕ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಕಾಂತು ಅಜಿಲ ಮೃತಪಟ್ಟ ದೈವ ನರ್ತಕ. ಈ ಘಟನೆಯ ಬಳಿಕ ಆ ಗ್ರಾಮದ ಜನ ದೈವದ ನರ್ತಕನ ಹುಡುಕಾಟದಲ್ಲಿ ತೊಡಗಿದ್ದರು.

ಇದೇ ವಿಚಾರದಲ್ಲಿ ಊರವರು ಪ್ರಶ್ನಾಚಿಂತನೆ ಇಟ್ಟಾಗ ಮೃತಪಟ್ಟವರ ಮಗನೇ ದೈವ ನರ್ತಕನಾಗಬೇಕು ಅಂತ ಕಂಡು ಬಂದಿತ್ತು. ಪ್ರಶ್ನೆಯಲ್ಲಿ ಕಂಡು ಬಂದಂತೆ ದೈವದ ಮುಂದೆ ಮೃತಪಟ್ಟ ದೈವ ನರ್ತಕನ ಮಕ್ಕಳಿಗೆ ದೀಕ್ಷೆ ಬೂಳ್ಯ ನೀಡಲಾಯಿತು.

ಕಾಂತು ಅಜಿಲನ ಮಕ್ಕಳಾದ ಮೋನಪ್ಪ ಹಾಗೂ ದಿನೇಶ್ ಅವರು ದೀಕ್ಷೆ ಬೂಲ್ಯ ಪಡೆದು, ಸಂಬಂಧಪಟ್ಟ ನಾಲ್ಕು ಗ್ರಾಮಕ್ಕೆ ದೈವಗಳ ಸೇವೆಯ ಜವಾಬ್ದಾರಿ ಹೊತ್ತರು. ಈ ಅಪೂರ್ವ ಕ್ಷಣವನ್ನು ಊರ ಹಾಗೂ ಪರವೂರಿನ ದೈವಭಕ್ತರು ಕಣ್ತುಂಬಿಕೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು