Categories: ಮಂಗಳೂರು

ಧರ್ಮಸ್ಥಳ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ನೃತ್ಯದ ತರಗತಿಗಳ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಒತ್ತು ನೀಡುವ ಸಲುವಾಗಿ ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ಶಾಸ್ತ್ರೀಯ ನೃತ್ಯದ ತರಗತಿಗಳ ಉದ್ಘಾಟನಾ ಸಮಾರಂಭ ಜೂ 7ರಂದು ನೆರವೇರಿತು.

ಅದೇ ಶಾಲೆಯ ಹಳೆಯ ವಿದ್ಯಾರ್ಥಿನಿ ಭರತನಾಟ್ಯದಲ್ಲಿ ವಿಶೇಷ ಸಾಧನೆ ಮಾಡಿರುವ ಕುಮಾರಿ ಧರಿತ್ರಿ ಬಿಡೆ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮನಸ್ಸನ್ನು ಕೇಂದ್ರೀಕರಿಸಲು ನೃತ್ಯ ಹಾಗೂ ಸಂಗೀತ ಎರಡು ಉತ್ತಮ ಸಾಧನಗಳು. ಎರಡೂ ಒಂದೇ ನಾಣ್ಯದ ಮುಖಗಳಿದ್ದಂತೆ. ಶ್ರದ್ಧೆ ಹಾಗೂ ಏಕಾಗ್ರತೆ ಇದ್ದರೆ ಬದುಕಿನಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು. ಹಲವು ರೋಗಗಳಿಗೆ ಇದು ರಾಮಬಾಣವೂ ಹೌದು ಎಂದು ತನ್ನ ವೈಯಕ್ತಿಕ ಜೀವನದ ಹಲವು ಯಶಸ್ಸಿನ ಉದಾಹರಣೆಗಳನ್ನು ನೀಡಿ ಶುಭ ಕೋರಿದರು.

ಶಾಸ್ತ್ರೀಯ ಸಂಗೀತದ ತರಬೇತುದಾರರಾಗಿರುವ ನಿವೃತ್ತ ಶಿಕ್ಷಕಿ  ಮನೋರಮ ತೋಳ್ಪಡಿತ್ತಾಯ ವಿದ್ಯಾರ್ಥಿ ಜೀವನದಲ್ಲಿ ಸಂಗೀತದ ಮಹತ್ವವನ್ನು ವಿವರಿಸಿದರು. ಭರತನಾಟ್ಯದ ತರಭೇತುದಾರರಾದ ವಿದ್ಯಾ ಟೋಸರ್ ನಾಟ್ಯದ ಆರಂಭಿಕ ಹಂತದ ವಿಧಾನ ತಿಳಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ  ಪರಿಮಳ ಎಂ.ವಿ.ಶಾಲೆಯಲ್ಲಿ ಸಂಗೀತ,ನೃತ್ಯ ತರಬೇತಿ ಆರಂಭಿಸಿದ ಉದ್ದೇಶ ,ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಳ್ಳುವ ರೀತಿ ಹಾಗೂ ಅದರ ಪರಿಣಾಮಗಳನ್ನು ಸವಿಸ್ತಾರವಾಗಿ ವಿವರಿಸಿದರು.

ಆರಾಧ್ಯ ಪಿ ಜೋಶಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಸನಾ ರಾಜೀವ್ ಸ್ವಾಗತಿಸಿ,ವೈಷ್ಣವಿ ವಂದಿಸಿದರು . ಅತಿಥಿಗಳ ನ್ನು ವಿದ್ಯಾರ್ಥಿಗಳಾದ ಸಮ್ಯಕ್, ವಿದ್ವತ್ ಜೈನ್ ಮತ್ತು ಪ್ರಣವ್ ಜೋಯಿಷಾ ಪರಿಚಯಿಸಿದರು .ಶಾಲಾ ಶಿಕ್ಷಕರು, ವಿದ್ಯಾರ್ಥಿ ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿಭಾಗವಹಿಸಿದ್ದರು .

Ashika S

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

13 seconds ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

17 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

33 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

53 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

1 hour ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

1 hour ago