News Karnataka Kannada
Friday, May 03 2024
ಮಂಗಳೂರು

ಬಂಟರ ಮಾತೃ ಸಂಘದ ಗಣೇಶೋತ್ಸವ ಕಾರ್ಯಕ್ರಮ ಉದ್ಘಾಟನೆ

Inauguration of Ganeshotsav programme of Banthara Matru Sangha
Photo Credit : News Kannada

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೇಲ್ ನ ಓಂಕಾರ‌ ನಗರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.

ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ ಜೈರಾಜ್ ಬಿ ರೈ ಮತ್ತು ಸೌಮ್ಯ ಜೆ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸಮಾಜವನ್ನು ಒಂದುಗೂಡಿಸಲು ಇಂತಹ ಸಾರ್ವಜನಿಕ ಗಣೇಶೋತ್ಸವ ಪ್ರೇರಣೆಯಾಗುತ್ತದೆ ಎಂದರು. ಅಜಿತ್ ಕುಮಾರ್ ರೈ ಮಾಲಾಡಿ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಅದೆಲ್ಲವೂ ಕಾರ್ಯಗತಗೊಳ್ಳಲಿ ಎಂದವರು ತಿಳಿಸಿದರು.

ಶ್ರೀ ವೈಷ್ಣವಿ ದುರ್ಗಾ ದೇವಸ್ಥಾನ ದಶರಥ ನಗರ ಮಣಿಪಾಲದ ಆಡಳಿತ ಮೊಕ್ತೇಸರ ಬಿ ಜಯರಾಜ್ ಹೆಗ್ಡೆ, ಅಮ್ಮಣ್ಣಿ ಜೆ ಹೆಗ್ಡೆ ತೆನೆ ವಿತರಿಸಿದರು. ಈಎಸ್ ಎಂ ಸಬ್ ಮೇಜರ್ ಶಶಿಧರ ಆಳ್ವ ಧ್ವಜಾರೋಹಣಗೈದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಒಂದು ಕ್ರೀಯಾಶೀಲ ತಂಡವು ಕೆಲಸ ಮಾಡುತ್ತಿದೆ. ಇದರಿಂದ ಸಮಾರಂಭವು ಯಶಸ್ವಿಯಾಗುತ್ತಿದೆ ಎಂದು ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣ ಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ಬಿ ನಾಗರಾಜ ಶೆಟ್ಟಿ, ಬಿ ಶೇಖರ ಶೆಟ್ಟಿ, ಸುಧಾಕರ ಎಸ್ ಪೂಂಜ, , ವಸಂತ ಶೆಟ್ಟಿ, ಶರ್ಮಿಳಾ ಎಸ್ ಆಳ್ವ, ಭಾರತಿ ಜಿ ಶೆಟ್ಟಿ, ಅರುಣಾ ಎಸ್ ಶೆಟ್ಟಿ, ಆಶಾ ಜ್ಯೋತಿ ರೈ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಸಾರ್ವಜನಿಕರಿಗೆ ತೆನೆ ವಿತರಿಸಲಾಯಿತು.ಮಂಗಳೂರು ತಾಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ ಸ್ವಾಗತಿಸಿದರು. ಉಮೇಶ್ ರೈ ಪದವು ಮೇಗಿನಮನೆ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್, ಕವಿತಾ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು