ಪುತ್ತೂರು: ವಿಟ್ಲದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಕಂಪೆನಿ ನಿಯಮಿತ ಕಾರ್ಪೊರೇಟ್ ಕಚೇರಿಯು ಪುತ್ತೂರು ಕಲ್ಲಾರೆ ಪವಾಜ್ ಕಾಂಪ್ಲೆಕ್ಸ್ನಲ್ಲಿ ಜು. 1ರಂದು ಉದ್ಘಾಟನೆಗೊಳ್ಳಲಿದೆ. ಜು.2ರಂದು ಸಂಸ್ಥೆಯಿಂದ ಪಂಚಕಲ್ಪ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮ ಪುತ್ತೂರು ಪುರಭವನದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪೆನಿ ನಿಯಮಿತ ಇದರ ಅಧ್ಯಕ್ಷ ಕುಸುಮಾಧರ್ ಎಸ್.ಕೆ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜು.2ರಂದು ಪುತ್ತೂರು ಪುರಭವನದಲ್ಲಿ ಬೆಳಿಗ್ಗೆ ಪಂಚಕಲ್ಪ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕಾಸರಗೋಡು ಸಿಪಿಸಿಆರ್ಐಯ ನಿರ್ದೇಶಕ ಡಾ.ಕೆ.ಬಾಲಚಂದ್ರ ಹೆಬ್ಬಾರ್ ಅವರು ದೀಪ ಪ್ರಜ್ವಲಿಸಲಿದ್ದಾರೆ. ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ, ಕೃಷಿ ಇಲಾಖೆ ಮಂಗಳೂರು ಇದರ ಜಂಟಿ ನಿರ್ದೇಶಕ ಕೆಂಪೇಗೌಡ ಹೆಚ್, ಮಂಗಳೂರು ಕೃಷಿ ವಿಚಾರಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾಗಿರುವ ಡಾ.ರಮೇಶ್, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಬಿ.ಶ್ರೀಧರ ಶೆಟ್ಟಿ ಬೈಲುಗುತ್ತು, ಕೃಷಿಕರು ಮತ್ತು ಸ್ವಯಂ ಸೇವಾ ಸಂಸ್ಥೆಯ ನಿರ್ದೇಶಕ ರಾಜೇಶ್ ಬೆಜ್ಜಂಗಳ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಹೊನ್ನಪ್ಪ ಗೌಡ ಸವಣೂರು, ಕರ್ನಾಟಕ ರಾಜ್ಯ ರೈತಸಂಘ ಹಸಿರು ಸೇನೆ ದ.ಕ.ಜಿಲ್ಲಾ ಸಂಚಾಲಕ ಮತ್ತು ದ.ಕ.ಜಿಲ್ಲಾ ಸಂಘಟನೆಗಳ ಒಕ್ಕೂಟದ ಮುಖ್ಯಸ್ಥ ರೂಪೇಶ್ ರೈ ಅಳಿಮಾರ್, ಮತ್ತು ಕೃಷಿಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪೆನಿ ನಿಯಮಿತ ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿ ಚೇತನ್ ಎ,ಸಂಸ್ಥೆಯ ನಿರ್ದೇಶಕರಾದ ವರ್ಧಮಾನ್ ಎನ್, ಲತಾ ಪಿ ಮತ್ತು ಡಾ. ರಾಜೇಶ್ ಬೆಜ್ಜಂಗಳ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.