ಮಂಗಳೂರು: ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಸದಾ ಸಾಮಾಜಿಕ ಸೇವೆಗಳಲ್ಲಿ ಮುಂಚೂಣಿಯಲ್ಲಿದ್ದು, ತನ್ನ ಸಿ.ಎಸ್.ಆರ್ ಚಟುವಟಿಕೆಗಳ ಮೂಲಕ ಸಮಾಜದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತಾ, ಸಮಾಜ ಸುಧಾರಿಕರಣಕ್ಕೆ ಶ್ರಮಿಸುತ್ತಿರುವ ವಿಶ್ವವಿದ್ಯಾಲಯವಾಗಿದೆ.
ಘನಾ ವಿಶ್ವವಿದ್ಯಾಲಯವು ಶಿಕ್ಷಣ, ಸಂಶೋಧನೆ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಪ್ರಮುಖ ಶಕ್ತಿಯಾಗಿ ಮಾರ್ಪಟ್ಟಿದೆ. ಸಕಾರಾತ್ಮಕ ಸಾಮಾಜಿಕ ಪ್ರಭಾವವನ್ನು ಸೃಷ್ಟಿಸುವ ಪರಂಪರೆಗೆ ಅನುಗುಣವಾಗಿ, ಯೆನೆಪೋಯ ( ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ), ಕೊಣಾಜೆ, ಮಂಜನಾಡಿ ಗ್ರಾಮ ಪಂಚಾಯತ್, ಮತ್ತು ಕೋಟೆಕಾರ್ ಪಟ್ಟಣ ಪಂಚಾಯತ್ ಸಹಯೋಗದೊಂದಿಗೆ ನಾಟೆಕಲ್ ವೃತ್ತದ ಸುಂದರೀಕರಣವನ್ನುಕಾರ್ಯಗತಗೊಳಿಸಿದೆ. ದಟ್ಟವಾದ ವಾಹನ ಸಂಚಾರವಿರುವ ನಾಟೆಕಲ್ನ ಪ್ರದೇಶದಲ್ಲಿ ಹೊಸದಾಗಿ ನಿರ್ಮಿಸಲಾದ ಈ ವೃತ್ತವು ಟ್ರಾಫಿಕ್ ಹರಿವನ್ನು ಸುಧಾರಿಸುವುದರೊಂದಿಗೆ ಸುಗಮ ಪ್ರಯಾಣವನ್ನು ಖಾತ್ರಿಗೊಳಿಸುತ್ತದೆ.
ನಾಟೆಕಲ್ ಜಂಕ್ಷನ್ನ “ಯೆನೆಪೋಯ ವೃತ್ತವು ಜನವರಿ 26 ರಂದು ಲೋಕಾರ್ಪಣೆಯಾಗಲಿದ್ದು, ಗೌರವಾನ್ವಿತ ಮುಖ್ಯ ಅತಿಥಿಗಳಾದ ಶ್ರೀ. ದಿನೇಶ್ ಗುಂಡೂರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವ, ದಕ್ಷಿಣ ಕನ್ನಡ, ಕರ್ನಾಟಕ ಸರ್ಕಾರ, ಇವರು ಶ್ರೀ. ಯು.ಟಿ.ಖಾದರ್, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಲಿದ್ದಾರೆ. ಯೆನೆಪೋಯ ( ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಕುಲಪತಿ ಡಾ. ಯೆನೆಪೋಯ ಅಬ್ದುಲ್ಲ ಕುಂಞಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಿಶ್ವವಿದ್ಯಾನಿಲಯದ ಅಧಿಕಾರಿಗಳು ಮತ್ತು ಕೊಣಾಜೆ, ಮಂಜನಾಡಿ ಗ್ರಾಮ ಪಂಚಾಯತ್, ಮತ್ತು ಕೋಟೆಕಾರ್ ಪಟ್ಟಣ ಪಂಚಾಯತ್ ಪ್ರತಿನಿಧಿಗಳು ಹಾಗು ಸ್ಥಳೀಯ ನಿವಾಸಿಗಳು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.