Categories: ಮಂಗಳೂರು

ಗಂಗಾಧರ ಗೌಡರ ಮನೆ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು

ಬೆಳ್ತಂಗಡಿ: ಮಾಜಿ ಸಚಿವ, ಕಾಂಗ್ರೇಸ್ ಪಕ್ಷದ ಗಂಗಾಧರ ಗೌಡರನ್ನು ಆದಾಯ ತೆರಿಗೆ ಅಧಿಕಾರಿಗಳು ಪ್ರಶ್ನಿಸಿದ್ದಾರೆ.
ಸೋಮವಾರ ಮುಂಜಾನೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು, ಇದೇ ಸಂದರ್ಭ ಅವರ ಕಾಲೇಜಿಗೆ ಹಾಗೂ ಇಂದಬೆಟ್ಟಿನಲ್ಲಿರುವ ಇನ್ನೊಂದು ಮನೆಗೂ ದಾಳಿ ನಡೆಸಿ ದಾಖಲೆ ಇತ್ಯಾದಿಗಳನ್ನು ಪರಿಶೀಲಿಸಿದ್ದಾರೆ.

ಮುಂಜಾನೆಯಿಂದ ತಡ ರಾತ್ರಿವರೆಗೂ ಶೋಧ ಕಾರ್ಯಾಚರಣೆ ನಡೆದಿದೆ. ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲಾ.
ಗೌಡರು ಮೂಲತಃ ಕಾಂಗ್ರೇಸ್ ನಾಯಕರು ಬಳಿಕ ಅವರು ಜೆಡಿಎಸ್‌ಗೂ, ಬಿಜೆಪಿಗೂ ಪಕ್ಷಾಂತರ ಮಾಡಿದ್ದರು. ಇದೀಗ ಕಾಂಗ್ರೇಸ್‌ನಲ್ಲಿದ್ದು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆ ಹೊಂದಿದ್ದರಲ್ಲದೆ ಅರ್ಜಿಯನ್ನೂ ಹಾಕಿದ್ದರು. ಆದರೆ ಟಿಕೇಟ್ ಸಿಗದೆ ನಿರಾಶರಾಗಿದ್ದರು.

ಈ ಮಧ್ಯೆ ಭಾನುವಾರ ಅವರನ್ನು ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಆದಾಯ ತೆರಿಗೆ ದಾಳಿಯ ವಿದ್ಯಮಾನ ಕುತೂಹಲ ಕೆರಳಿಸಿದೆಯಲ್ಲದೆ ಪ್ರಸ್ತುತ ರಾಜಕೀಯದಲ್ಲಿ ಸಂಚಲನಕ್ಕೂ ಕಾರಣವಾಗಿದೆ.

Gayathri SG

Recent Posts

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

12 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

42 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

58 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

1 hour ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

2 hours ago