ಮಂಗಳೂರು: ಗುಪ್ತಚರ ಇಲಾಖೆ ಕಚೇರಿಯಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಸಿಬ್ಬಂದಿ ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದು, ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ ಯು (45) ಎಂದು ಗುರುತಿಸಲಾಗಿದೆ.
ರಾಜೇಶ್ 1993ರ ಬ್ಯಾಚ್ನವರಾಗಿದ್ದು, ಅವರಿಗೆ ಏಳು ವರ್ಷಗಳ ಸೇವಾವಧಿ ಉಳಿದಿತ್ತು. ಸುರತ್ಕಲ್ ಮತ್ತು ಪಣಂಬೂರು ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿಯಾಗಿಯೂ ಕೆಲಸ ಮಾಡಿದ್ದರು.