News Karnataka Kannada
Monday, April 29 2024
ಮಂಗಳೂರು

ಮಂಗಳೂರು ಕುದ್ಮಲ್ ರಂಗರಾವ್ ಪುರಭವನದಲ್ಲಿ ಅಂತರಾಷ್ಟ್ರೀಯ ಯೋಗದಿನಾಚರಣೆ

Yoga
Photo Credit : Freepik

ಮಂಗಳೂರು: ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ, ಆಯುಷ್ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗದಿನಾಚರಣೆಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು.

ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಅಲೆಮಾರಿ/ಅರೆ ಅಲೆಮಾರಿ‌ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾಆಯುಷ್ ಅಧಿಕಾರಿ ಡಾ.ಮಹಮ್ಮದ್ ಇಕ್ಬಾಲ್, ನೆಹರೂ ಯುವ ಕೇಂದ್ರದ ರಘುವೀರ್ ಸೂಟರ್ ಪೇಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ ಹಾಗೂ ಇತರೆ ಗಣ್ಯರು ಭಾಗವಹಿಸಿದ್ದರು.

ಯೋಗ ಗುರುಗಳಾದ ಗೋಪಾಲ ಕೃಷ್ಣ ದೇಲಂಪಾಡಿ ಅವರು ಯೋಗಾಸನದ ವಿವಿಧ ಭಂಗಿಗಳನ್ನು ವಿವರಿಸುತ್ತಾ, ಯೋಗಾಭ್ಯಾಸ ಮಾಡಿಸಿದರು.

ಆಯುಷ್ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ಹಲವು ಯೋಗ ಸಂಘಟನೆಗಳ ಯುವಕ-ಯುವತಿಯರು, ಯೋಗ ಪ್ರಿಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು