ಜಾಲ್ಸೂರು: ಜಾಲ್ಸೂರಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹಿನ್ನೆಲೆಯಲ್ಲಿ ಗುಡ್ಡಕ್ಕೆ ಬೆಂಕಿ ತಗುಲಿದ ಪರಿಣಾಮವಾಗಿ ಹಲವು ಪ್ರದೇಶಗಳಿಗೆ ವ್ಯಾಪಿಸಿ ಹೊತ್ತಿ ಉರಿದ ಘಟನೆ ಮಾ.6ರಂದು ಅಪರಾಹ್ನ ಸಂಭವಿಸಿದೆ.
ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯ ಬಳಿಯಲ್ಲಿ ಮುಖ್ಯರಸ್ತೆಯ ಪಕ್ಕದಲ್ಲಿರುವ ಗುಡ್ಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮವಾಗಿ ಬೆಂಕಿಯ ಕಿಡಿ ಒಣಗಿದ ತರಗೆಲೆಗೆ ಬಿದ್ದು, ಹಲವಾರು ಪ್ರದೇಶಗಳನ್ನು ವ್ಯಾಪಿಸಿ ಹೊತ್ತಿ ಉರಿಯತೊಡಗಿತು. ಇದನ್ನು ಕಂಡ ಸ್ಥಳೀಯರು ಸೇರಿ ಅಗ್ನಿಶಾಮಕ ಠಾಣೆಗೆ ದೂರವಾಣಿ ಕರೆ ಮಾಡಿ ತಿಳಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾದರೆನ್ನಲಾಗಿದೆ.
ಆದರೆ ಸುಳ್ಯದ ಅಗ್ನಿಶಾಮಕ ಠಾಣೆಯ ವಾಹನ ಇದೇ ವೇಳೆಯಲ್ಲಿ ನಿಂತಿಕಲ್ಲಿನಲ್ಲಿ ಬೆಂಕಿ ಆಕಸ್ಮಿಕವಾದುದನ್ನು ನಂದಿಸಲು ತೆರಳಿದ್ದ ಕಾರಣ ತಕ್ಷಣ ಸ್ಥಳಕ್ಕೆ ಬರಲು ಸಾಧ್ಯವಾಗಲಿಲ್ಲವೆನ್ನಲಾಗಿದೆ. ಆದರೆ ಸುಳ್ಯ ಅಗ್ನಿಶಾಮಕ ಠಾಣೆಯವರು ಪುತ್ತೂರಿನ ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಿದ ಕಾರಣದಿಂದ ಪುತ್ತೂರಿನಿಂದ ಅಗ್ನಿಶಾಮಕ ವಾಹನ ಜಾಲ್ಸೂರಿಗೆ ಬಂದು ಬೆಂಕಿ ನಂದಿಸಲು ತೊಡಗಿತೆನ್ನಲಾಗಿದೆ.
ಈ ವೇಳೆ ಸುಳ್ಯದ ಅಗ್ನಿಶಾಮಕ ವಾಹನವೂ ಸ್ಥಳಕ್ಕೆ ಬಂದು ಬಳಿಕ ಎರಡೂ ವಾಹನದವರು ಸೇರಿ ಬೆಂಕಿ ನಂದಿಸಿದರೆಂದು ತಿಳಿದುಬಂದಿದೆ. ಅಗ್ನಿಶಾಮಕ ವಾಹನ ಬರುವ ವೇಳೆಗೆ ಬೆಂಕಿಯ ಕೆನ್ನಾಲಗೆ ಬಹಳಷ್ಟು ಪ್ರದೇಶಗಳನ್ನು ವ್ಯಾಪಿಸಿ ಹೊತ್ತಿ ಉರಿದಿದೆ ಎಂದು ತಿಳಿದುಬಂದಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…