News Karnataka Kannada
Monday, May 06 2024
ಮಂಗಳೂರು

ಜಯಂತ್ಯೋತ್ಸವ ಸಂಸ್ಮರಣೆ: ಶಾಸಕರ ನೇತೃತ್ವದಲ್ಲಿ ದೇವರಮಾರು ಗದ್ದೆ ಶುಚಿತ್ವ

Jayanthyotsava Commemoration: Mla's Leadership Cleans Devaramaru Field
Photo Credit : News Kannada

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆಯ ಬಳಿಕ ದೇವರಮಾರು ಗದ್ದೆಯಲ್ಲಿ ಬಿದ್ದಿದ್ದ ಕಸ – ತ್ಯಾಜ್ಯವನ್ನು ಹೆಕ್ಕುವ ಮೂಲಕ ಶಾಸಕ ಸಂಜೀವ ಮಠಂದೂರು ಅವರು ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಜಯಂತ್ಯೋತ್ಸವ ಸಂಸ್ಮರಣೆ ಬಳಿಕ ದೇವರಮಾರು ಗದ್ದೆಯಲ್ಲಿ ತ್ಯಾಜ್ಯ ಎಲ್ಲೆಂದರಲ್ಲಿ ಬಿದ್ದಿತ್ತು. ಇದನ್ನು ಗಮನಿಸಿದ ಸಂಸ್ಮರಣಾ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಮತ್ತವರ ತಂಡ ತ್ಯಾಜ್ಯವನ್ನು ಹೆಕ್ಕಿದ್ದಾರೆ. ಬಳಿಕ ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದಾರೆ. ಈ ಮೂಲಕ ದೇವಸ್ಥಾನದ ಆವರಣವನ್ನು ಶುಚಿಯಾಗಿಡುವ ಕೆಲಸ ಮಾಡಿದ್ದಾರೆ.

ಜಯಂತ್ಯೋತ್ಸವ ಸಂಸ್ಮರಣಾ ಸಮಿತಿಯ ಕಾರ್ಯಾಲಯದಿಂದ ಆರಂಭಗೊಂಡ ಶುಚಿತ್ವಕ್ಕೆ ಶಾಸಕ ಸಂಜೀವ ಮಠಂದೂರು ಅವರ ಜೊತೆ ಸಮಿತಿಯ ಪ್ರಮುಖರು ಜೊತೆಯಾದರು.

ಸಮಿತಿ ಜಿಲ್ಲಾ ಸಂಚಾಲಕ ಚಿದಾನಂದ ಬೈಲಾಡಿ, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಪ್ರಧಾನ ಕಾರ್ಯದರ್ಶಿ ಸುಂದರ ಗೌಡ ನಡುಬೈಲು, ಮಹಿಳಾ ಗೌಡ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ. ಗೌಡ, ಗೌರಿ ಬನ್ನೂರು, ಪ್ರಮುಖರಾದ ದಯಾನಂದ ಕೆ., ಶ್ರೀಧರ ಗೌಡ ಕಣಜಾಲು, ಶ್ರೀಧರ ಗೌಡ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು