ಸುರತ್ಕಲ್: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಉದ್ದೇಶದಿಂದ ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಲಪಟಾಯಿಸಲು ಯತ್ನ ನಡೆಸಿದ ಘಟನೆಗೆ ಸಂಬಂಧಿಸಿ 15 ಲಕ್ಷ ರೂ,. ಸಹಿತ ನಾಲ್ವರು ಅಂತಾರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ಆ.4ರಂದು ವಿದ್ಯಾದಾಯಿನಿ ಶಾಲೆಯ ಮುಂಭಾಗದ ಜಯಶ್ರೀ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸೌತ್ ಇಂಡಿಯನ್ ಬ್ಯಾಂಕ್ ಬ್ರಾಂಚ್ನ ಎಟಿಎಂ ಮೆಶಿನ್ ಗೆ ಜೆಸಿಬಿ ನುಗ್ಗಿಸಿ ದರೋಡೆ ಮಾಡಲು ಯತ್ನ ನಡೆದಿತ್ತು. ಎಟಿಎಂಗೆ ಜೆಸಿಬಿ ನುಗ್ಗಿಸುವ ವೇಳೆ ಎಟಿಎಂನ ಗಾಜು ಪುಡಿಯಾಗುತ್ತಿದ್ದಂತೆಯೇ ಎಮರ್ಜೆನ್ಸಿ ಸೈರನ್ ಮೊಳಗಿದ್ದು, ಕಳ್ಳರು ಜೆಸಿಬಿ ಸಹಿತ ಪರಾರಿಯಾಗಿದ್ದರು. ಬಳಿಕ ಕಳ್ಳರು ಕೃತ್ಯಕ್ಕೆ ಬಳಸಿದ ಜೆಸಿಬಿ ಜೋಕಟ್ಟೆಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಶಿವಮೊಗ್ಗದ ಶಿಕಾರಿಪುರದ ದೇವರಾಜ್(24), ಭರತ್ ಹೆಚ್ (20), ನಾಗರಾಜ ನಾಯ್ಕ (21), ಧನರಾಜ್ ನಾಯ್ಕ( 22) ಅವರನ್ನು ಬಂಧಿಸಲಾಗಿದೆ.