ಮಂಗಳೂರು: ಜೆಡಿಎಸ್ ಪಕ್ಷಕ್ಕೆ ಕರಾವಳಿಯಲ್ಲಿ ಅಸ್ತಿತ್ವವೇ ಇಲ್ಲ ಎಂದು ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿ ಇನಾಯತ್ ಅಲಿ ಹೇಳಿದರು. ನ್ಯೂಸ್ ಕನ್ನಡ, ನ್ಯೂಸ್ ಕರ್ನಾಟಕ ಪ್ರತಿನಿಧಿಯೊಂದಿಗೆ ಅವರು ಮಾತನಾಡುವ ವೇಳೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ನಲ್ಲಿದ್ದ ಮೊಹಿಯುದ್ದೀನ್ ಬಾವಾ ಪಕ್ಷ ತೊರೆದು ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿಯಾಗಿ ಮತಗಳು ಹಂಚಿಹೋಗುತ್ತವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಮಗೆ ಜೆಡಿಎಸ್ ಎದುರಾಳಿ ಅಲ್ಲವೇ ಅಲ್ಲ. ಇಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮಾತ್ರ ನೇರ ಹಣಾಹಣಿ ಇದೆ ಎಂದು ಅಲಿ ಹೇಳಿದರು. ಟೆಕೆಟ್ ಸಿಗದ ನಿರಾಶೆಯಿಂದ ಬಾವಾ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಕಾರ್ಯಕರ್ತರು, ಮುಖ್ಯವಾಗಿ ಜನತೆ ನನ್ನೊಂದಿಗಿದ್ದಾರೆ. ಅಲ್ಲದೆ ಜನರ ಸ್ಪಂದನೆ ಉತ್ತಮವಾಗಿದೆ ಎಂದು ಅವರು ಹೇಳಿದರು.
ಮಂಗಳೂರು ಉತ್ತರ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಎತ್ತರಕ್ಕೆ ಏರಿಸುವುದು ನಮ್ಮ ಧ್ಯೇಯ. ಅದೇ ರೀತಿ ಯುವಜನರು ಉದ್ಯೋಗವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯವಾಗಿ ಉದ್ಯೋಗ ನೀಡಲು ಪ್ರವಾಸೋದ್ಯಮ, ಐಟಿ, ಟೆಕ್ಸ್ಟೈಲ್ ಉದ್ಯಮಕ್ಕೆ ಒತ್ತು ನೀಡಲಾಗುವುದು. ಕುಡಿಯುವ ನೀರಿನ ಯೋಜನೆಗೆ ಒತ್ತುನೀಡಲಾಗುವುದು. ಅದೇ ರೀತಿ ಗುರುಪುರ ಭಾಗದಲ್ಲಿ ಸುಸಜ್ಜಿತ ಆಸ್ಪತ್ರೆ ಅಗತ್ಯವಿದೆ. ಅಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು. ಎಂಆರ್ಪಿಎಲ್, ಒಎನ್ಜಿಸಿಯಲ್ಲಿ ಸ್ಥಳೀಯರಿಗೆ ಉದ್ಯೋಗ ಒದಗಿಸಿಕೊಡಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.