ಮಂಗಳೂರು

ಮಂಗಳೂರು: ಶ್ರೀನಿವಾಸ ವಿವಿಯಲ್ಲಿ ಉದ್ಯೋಗ ಮೇಳ

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ – ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಶ್ರೀನಿವಾಸ ಜಾಬ್ ಫೇರ್ “ಉದ್ಯೋಗಮೇಳ – ೨೦೨೩” ೨೭ ನವೆಂಬರ್ ೨೦೨೩ ರಂದು ಬೆಳಿಗ್ಗೆ ೯:೩೦ ರಿಂದ ಸಂಜೆ ೫:೦೦ ರವರೆಗೆ ಪಾಂಡೇಶ್ವರ ಶ್ರೀನಿವಾಸ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ನಲ್ಲಿ ನಡೆಯಿತು.

ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ.ಸಿಎ ಎ. ರಾಘವೇಂದ್ರರಾವ್ ಆಶೀರ್ವಾದದೊಂದಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಯಿತು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಸಹ ಕುಲಾಧಿಪತಿ ಡಾ.ಎ. ಶ್ರೀನಿವಾಸ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ಜ್ಞಾನ ಗಳಿಸಿ, ಪ್ರಾಮಾಣಿಕವಾಗಿ ಸಮಾಜಕ್ಕೆ ಕೈಲಾಗಿರುವುದನ್ನು ನೀಡಿ ಎಂದರು.

ಗ್ಲೋ ಟಚ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ, ಅಂ. ಎಂ.ಎನ್. ಪೈ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶ್ರೀನಿವಾಸ ವಿಶ್ವವಿದ್ಯಾಲಯವು ಈ ಉದ್ಯೋಗ ಮೇಳವನ್ನು ಆಯೋಜಿಸಿದ್ದಕ್ಕಾಗಿ ನಾನು ಪ್ರಶಂಸಿಸುತ್ತೇನೆ. ಇದು ಉದ್ಯಮಗಳಿಗೆ ತಾವು ಹುಡುಕುತ್ತಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವೇದಿಕೆಯನ್ನು ಒದಗಿಸುತ್ತದೆ. ನಾವು ಅನುಭವದಿಂದ ಕಲಿಯಬೇಕು ಆಗ ಮಾತ್ರ ನಮ್ಮನ್ನು ನಾವು ಸುಧಾರಿಸಿಕೊಳ್ಳಬಹುದು ಎಂದರು.

ಕಾರ‍್ಯಕ್ರಮದ ಮುಖ್ಯ ಅತಿಥಿ ಕರ್ಣಾಟಕ ಬ್ಯಾಂಕ್ ಮಂಗಳೂರು ಆಂತರಿಕ ವಿಜಿಲೆನ್ಸ್ ಮುಖ್ಯಸ್ಥರು ಮತ್ತು ಮುಖ್ಯ ಅನುಸರಣೆ ಅಧಿಕಾರಿ ನಿರ್ಮಲ್‌ ಕುಮಾರ್ ಕೇಚಪ್ಪ ಹೆಗಡೆ ಮಾತನಾಡಿ, ನೀವು ಪ್ರಯತ್ನವನ್ನು ಮಾಡಬೇಕು. ಸವಾಲುಗಳನ್ನು ತೆಗೆದುಕೊಳ್ಳಲು ಸಿದ್ಧರಾಗಿರಬೇಕು. ನಿಮ್ಮ ಜೀವನದಲ್ಲಿ ನೀವು ಸಾಧಿಸಲು ಬಯಸಿದರೆ, ಸವಾಲುಗಳನ್ನು ಸ್ವೀಕರಿಸಲು ಸಿದ್ಧರಾಗಿರಿ ಎಂದು ಸಲಹೆ ನೀಡಿದರು.

ಶ್ರೀನಿವಾಸ ಉದ್ಯೋಗ ಮೇಳದಲ್ಲಿ ೪೯ ಕಂಪನಿಗಳು ಆಗಮಿಸಿದ್ದು, ೧೨೦೦ ಜನರು ಭಾಗವಹಿಸಿ ೬೭೮ ಜನರನ್ನು ಶಾರ್ಟ್‌ಲಿಸ್ಟ್‌ ಮಾಡಲಾಗಿದೆ. ಶ್ರೀನಿವಾಸ ವಿಶ್ವವಿದ್ಯಾಲಯದ ಪ್ರಭಾರ ಉಪಕುಲಪತಿ, ರಿಜಿಸ್ಟ್ರಾರ್ ಡಾ. ಅನಿಲ್ ಕುಮಾರ್, ಶ್ರೀನಿವಾಸ ವಿಶ್ವವಿದ್ಯಾಲಯದ ಅಭಿವೃದ್ಧಿ ರಿಜಿಸ್ಟರ್ ಡಾ. ಅಜಯ್ ಕುಮಾರ್, ಶ್ರೀನಿವಾಸ ವಿಶ್ವವಿದ್ಯಾಲಯದ ಮೌಲ್ಯಮಾಪನ ರಿಜಿಸ್ಟರ್ ಡಾ.ಶ್ರೀನಿವಾಸ್ ಮಯ್ಯ ಡಿ. ಉಪಸ್ಥಿತರಿದ್ದರು. ಶ್ರೀನಿವಾಸ ವಿಶ್ವವಿದ್ಯಾಲಯದ ತರಬೇತಿ ಮತ್ತು ನಿಯೋಜನೆ ಅಧಿಕಾರಿ ಪ್ರೊ.ಶ್ವೇತಾ ಪೈ ಸ್ವಾಗತಿಸಿ, ಪ್ರೊ.ಶ್ವೇತಾ ಭಟ್ ವಂದಿಸಿದರು. ಪ್ರೊ.ರಿಯಾ ಉಪ್ಪಳ ಮತ್ತು ಪ್ರೊ.ದಿವ್ಯಾ ನವೀನ್ ಕರ‍್ಯಕ್ರಮ ನಿರೂಪಿಸಿದರು.

Gayathri SG

Recent Posts

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 min ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

9 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

26 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

27 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

38 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

39 mins ago