ಮಂಗಳೂರು,ಮೇ.20: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದಿಂದ ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಮೂಡಿಸುವ ವರದಿಗಾರಿಕೆಗೆ `ಬ್ರ್ಯಾಂಡ್ ಮಂಗಳೂರು’ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು2022ನೇ ವರ್ಷದ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರು, ದೃಶ್ಯ ಮಾಧ್ಯಮ ದ ವರದಿಗಾರರು ಅರ್ಜಿ ಸಲ್ಲಿಸಬಹುದಾಗಿದೆ. ಪ್ರಶಸ್ತಿ 5,001 ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳ ಗೊಂಡಿದೆ. ಪ್ರಶಸ್ತಿಗೆ 2022ರ ಜ.1ರಿಂದ ಡಿ.31ರವರೆಗಿನ ವರದಿಗಳನ್ನು ಪರಿಗಣಿಸಲಾ ಗುವುದು.ಪ್ರಶಸ್ತಿಗಾಗಿ ಅರ್ಜಿಸಲ್ಲಿಸುವವರು ಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿಯ ನಾಲ್ಕು ಪ್ರತಿಗಳನ್ನು (ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು.ದೃಶ್ಯ ಮಾಧ್ಯಮದ ವರದಿಗಾರರು ಸಿ.ಡಿ ಯೊಂದಿಗೆ ವರದಿ ಪ್ರಕಟವಾದ ದಿನಾಂಕದ ಕುರಿತಂತೆ ಸೂಕ್ತ ದಾಖಲೆ ಅಗತ್ಯ. ಅರ್ಜಿಗಳನ್ನು ಕಳುಹಿಸಲು 2023 ಜೂನ್ 10 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸಲು ವಿಳಾಸ: ಪ್ರಧಾನ ಕಾರ್ಯದರ್ಶಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ, ಲೇಡಿಹಿಲ್ ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು-6 ಇಲ್ಲಿಗೆ ಕಳುಹಿಸುವಂತೆ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಹೆಡಿಯಾಲ ಉಪ ವಿಭಾಗದ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಅರಣ್ಯ ಪ್ರದೇಶದಲ್ಲಿ ಹುಲಿಯೊಂದರ ಮೃತದೇಹಪತ್ತೆಯಾಗಿದ್ದು 11…
ಅತ್ಯಾಚಾರ ಆರೋಪ ಮತ್ತು ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಹಾಲಿ ಶಾಸಕ ಹೆಚ್ಡಿ ರೇವಣ್ಣರನ್ನು ಕಳೆದ ದಿನ ಎಸ್ಐಟಿ…
ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಏರಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಬಸವಾದಿ ಶರಣರು ಬಯಸಿದರೆ ಪ್ರಧಾನಿಯಾಗಲಿದ್ದಾರೆ. ಅದರಿಂದ ಈ ಹೈದರಾಬಾದ್ ಕರ್ನಾಟಕ…
ರಾಜ್ಯದಲ್ಲಿರುವ ಭೀಕರ ಬರಗಾಲದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ಬಹಳ ನೆರವಾಗಿವೆ' ಎಂದು ನಟ-ನಿರ್ಮಾಪಕರೂ ಆದ ಕಾಂಗ್ರೆಸ್…
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಹೆಚ್ಡಿ ರೇವಣ್ಣ ಬಂಧನ ಬೆನ್ನಲ್ಲೇ ಪ್ರಜ್ವಲ್ ಬೇಟೆ ಕೂಡ…
ಔರಾದ್ ತಾಲ್ಲೂಕಿನ ವಡಗಾಂವ್ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪರಿಶಿಷ್ಟ ಜಾತಿಯ ಮುಖಂಡ ಬಾಬುರಾವ ಅಡಕೆ ಅವರು ನಗರದಲ್ಲಿ ಶನಿವಾರ ಬಿಜೆಪಿ…