Categories: ಮಂಗಳೂರು

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಮಂಗಳೂರು:   ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ ಬೆಂಗಳೂರಿನಿಂದ ಚಾರ್ಮಾಡಿ ಮೂಲಕ   ಬೆಳ್ತಂಗಡಿಗೆ ಅವರ ಪಾರ್ಥಿವ ಶರೀರ ಆಗಮಿಸಲಿದೆ.

ಬೆಳಿಗ್ಗೆ 10.30 ಗಂಟೆಗೆ ಹಳೇಕೋಟೆ  ಅವರ ಮನೆಯಿಂದ ತಾಲೂಕು ಕ್ರೀಡಾಂಗಣಕ್ಕೆ  ಪಾರ್ಥಿವ ಶರೀರವನ್ನು  ತಂದು   ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಅಪರಾಹ್ನ ಬೆಳ್ತಂಗಡಿ ನಗರದಲ್ಲಿ   ಪಾರ್ಥಿವ ಶರೀರದ ಅಂತಿಮ ಯಾತ್ರೆಯನ್ನು ಮೆರವಣಿಗೆಯ ಮೂಲಕ ನಡೆಸಿ ಅವರಿಗೆ ಗೌರವ ಸಲ್ಲಿಸಲಾಗುತ್ತದೆ.

ನಂತರ   ಅಂತ್ಯ ಸಂಸ್ಕಾರ ಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ  ಅವರ ಹಳೇಕೋಟೆಯ ಮನೆಯ ಸಮೀಪ ನಡೆಯಲಿದೆ . ಮೃತರ ಗೌರವಾರ್ಥ ನಗರದ ಹೋಟೆಲ್, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತ ಬಂದ್ ಮಾಡಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಈ ಮೂಲಕ ವಿನಂತಿಸುತ್ತಿದ್ದೇವೆ.

ಮೃತರ ಅಂತಿಮ ದರ್ಶನಕ್ಕೆ ಮುಖ್ಯ ಮಂತ್ರಿ, ಉಪ ಮುಖ್ಯ ಮಂತ್ರಿ  ಸೇರಿದಂತೆ ಸಚಿವರು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ ̤ಸಾರ್ವಜನಿಕರು, ಅವರ ಅಭಿಮಾನಿಗಳು, ವಿವಿಧ ಕ್ಷೇತ್ರದ ಗಣ್ಯರಿಗೆ ತಾಲೂಕು ಕ್ರೀಡಾಂಗಣ ದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲರೂ ನಮ್ಮೊಂದಿಗೆ ಸಹಕರಿಸಬೇಕಾಗಿ ವಿನಂತಿ.

Nisarga K

Recent Posts

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

15 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

33 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

1 hour ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

2 hours ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

2 hours ago