ಕಡಬ: ಅ.20ರಂದು ಕಡಬ ತಾಲೂಕಿನ ಕಾಣಿಯೂರಿನಲ್ಲಿ ಇಬ್ಬರು ಬೆಡ್ ಶೀಟ್ ಮಾರಾಟಗಾರರಾದ ಮೊಹಮ್ಮದ್ ರಫೀಕ್ ಮತ್ತು ರಮೀಝುದ್ದೀನ್ ಎಂಬವರ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿರುವುದು ನಿಜವಾಗಿಯೂ ಖಂಡನೀಯ.
ಗಾಯಾಳುಗಳ ಹೇಳಿಕೆಯಂತೆ ಅವರ ಕಾರನ್ನು ಜಖಂಗೊಲಿಸಿ ಕಾರಿನಲ್ಲಿದ್ದ ಬೆಡ್ ಶೀಟನ್ನು ಹಾನಿಗೊಳಿಸಿ ಸುಮಾರು ಎರಡು ಲಕ್ಷ ರೂಪಾಯಿಗಳ ನಷ್ಟ ಮಾಡಿರುತ್ತಾರೆ.
ಈ ಬಗ್ಗೆ ದ.ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಅಲ್ ಹಾಜ್ ಕೆ.ಎಸ್ ಮೊಹಮ್ಮದ್ ಮಸೂದ್ ರವರ ನಿರ್ದೇಶನದಂತೆ ಮಾನ್ಯ ಮುಖ್ಯ ಮಂತ್ರಿಗಳು, ಗೃಹಸಚಿವರು, ಎಡಿಜಿಪಿ, ಐಜಿಪಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಸೆಂಟ್ರಲ್ ಕಮಿಟಿ ಉಪಾಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್ ರವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ನಂತರ ನಿಯೋಗವು ಆಸ್ಪತ್ರೆಗೆ ಭೇಟಿ. ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹನೀಫ್, ಕಾರ್ಯದರ್ಶಿಗಳಾದ ಅಹ್ಮದ್ ಬಾವ ಬಜಾಲ್, ಅಹ್ಮದ್ ಬಾವ ಪಡೀಲ್, ಡಿ.ಎಂ. ಅಸ್ಲಂ, ಮೊಯಿದಿನ್ ಮೊಣು, ಎಂ.ಎ. ಅಶ್ರಫ್, ಮೊಹಮ್ಮದ್ ಬಪ್ಪಳಿಗೆ, ಸಿ.ಎಂ ಹನೀಫ್, ಹಾಜಿ ರಿಯಾಝುದ್ದೀನ್, ಎನ್.ಕೆ. ಅಬೂಬಕ್ಕರ್ ಮೊದಲಾದವರು ಉಪಸ್ಥಿತರಿದ್ದರು.