News Karnataka Kannada
Saturday, May 04 2024
ಮಂಗಳೂರು

ಕದ್ರಿ ಕಾಳಭೈರವ ದೇವಸ್ಥಾನ: ಇಂದು ಪುನರ್ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ

Kadri Kalabhairava Temple: Brahmakalashabhisheka to be re-installed today
Photo Credit : News Kannada

ಮಂಗಳೂರು: ಮಂಗಳೂರಿನ ಶ್ರೀ ಕಾಲಭೈರವ ದೇವಸ್ಥಾನ ಸುವರ್ಣ ಕದಳೀ ಶ್ರೀ ಯೋಗೇಶ್ವರ ಮಠದ ಮಠಾಧೀಶರಾದ ರಾಜರಾಜೇಶ್ವರತಪೋನಿಧಿ ಶ್ರೀ ೧೦೦೮ ಶ್ರೀ ರಾಜಯೋಗಿ ನಿರ್ಮಲನಾಥಜೀ ಅವರ ಮಾರ್ಗದರ್ಶನದಲ್ಲಿ, ವೇದವಿದ್ವಾನ್ ದೇರೆಬೈಲು ವಿಠಲ್‌ದಾಸ್ ತಂತ್ರಿಗಳ ನೇತೃತ್ವದಲ್ಲಿ ಕದ್ರಿ ಸಿದ್ಧ ಪೀಠದೊಡೆಯ ಶ್ರೀ ಕಾಲಬೈರವ ದೇವರ ಪುನರ್ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಇಂದು ನಾಥ ಪಂಥದ ಸಂಪ್ರದಾಯದಂತೆ ವೈಧಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.

ಇದೇ ಸಂದರ್ಭದಲ್ಲಿ ಶಿಖರ ಪ್ರತಿಷ್ಠೆ-ಶ್ರೀ ಕಾಲಭೈರವ ಹಾಗೂ ಪರಿವಾರ ದೇವರುಗಳ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ, ಶ್ರೀ ಕಾಲಬೈರವ ದೇವರಿಗೆ ರೋಟ್‌ಪೂಜೆ, ಪ್ರಸನ್ನ ಪೂಜೆ ನಡೆಯಲಿದೆ.

ಈ ಬ್ರಹ್ಮಕಲಶಾಭಿಷೇಕಕ್ಕೆ ಗುಜರಾತಿನಿಂದ ತರಿಸಲಾದ ಸುಮಾರು ೬೦ ಲಕ್ಷ ರೂ. ವೆಚ್ಚದ ವಿಶಿಷ್ಠ ಕಪ್ಪು ಶಿಲೆಯ ಪೀಠದಲ್ಲಿ ಕಾಳ ಭೈರವ ದೇವರ ಪ್ರತಿಪ್ಠೆಯಾಗಲಿದೆ. ಸಾರ್ವಜನಿಕರು ಭಕ್ತಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಮಿತಿಯ ಅಧ್ಯಕ್ಷ ಯಚ್.ಕೆ. ಪುರುಷೋತ್ತಮ ಜೋಗಿ ಮತ್ತು ಪ್ರಧಾನ ಕಾರ್ಯದರ್ಶಿ ಸತೀಶ್ ಜೋಗಿ ಮಾಲೆಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು