ಮಂಗಳೂರು: ಕದ್ರಿಯಲ್ಲಿರುವ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಉಗ್ರಾಣದ ಚಪ್ಪರ ಮುಹೂರ್ತ ಹಾಗೂ ಸಾಂಸ್ಕೃತಿಕ ವೇದಿಕೆಯನ್ನು ಉದ್ಘಾಟಿಸಲಾಯಿತು.
ಯೋಗೇಶ್ವರ ಮಠದ ಪೀಠಾಧಿಪತಿ ರಾಜರಾಜೇಶ್ವರ ತಪೋನಿಧಿ 1008 ಶ್ರೀ ರಾಜಯೋಗಿ ನಿರ್ಮಲನಾಥಜೀ ಹಾಗೂ ಶ್ರೀ ಕ್ಷೇತ್ರ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಜಂಟಿಯಾಗಿ ಉದ್ಘಾಟಿಸಿದರು. ಮುಖ್ಯ ಅತಿಥಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ) ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಶುಭ ಕೋರಿದರು.
ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಎಚ್. ಕೆ. ಪುರುಷೋತ್ತಮ ಜೋಗಿ, ಪ್ರಧಾನ ಕಾರ್ಯದರ್ಶಿ ಸತೀಶ್ ಜೋಗಿ ಮಾಲೆಮಾರ್, ಪ್ರಧಾನ ಸಲಹೆಗಾರ ಹರಿನಾಥ ಜೋಗಿ, ಕೋಶಾಧಿಕಾರಿ ಶಿವರಾಮ ಜೋಗಿ, ಉಗ್ರಾಣ ಸಮಿತಿಯ ವಿನಯಾನಂದ ಕಾನಡ್ಕ, ಸಾಂಸ್ಕೃತಿಕ ಸಮಿತಿಯ ಮೋಹನ ಕೊಪ್ಪಲ ಮೊದಲಾದವರಿದ್ದರು.