News Karnataka Kannada
Sunday, April 28 2024
ಮಂಗಳೂರು

ಕಾಣಿಯೂರು| ಉಕ್ಕಿಹರಿಯುವ ಹೊಳೆಗೆ ಬಿದ್ದ ಕಾರು : ಸಿಸಿಟಿವಿಯಲ್ಲಿ ಅವಘಡದ ದೃಶ್ಯ ಸೆರೆ.

CCTV footage of the accident: Car falls into overflowing river
Photo Credit :

ಕಾಣಿಯೂರು: ಮಧ್ಯರಾತ್ರಿ ಭಾರೀ ವೇಗವಾಗಿ ಬಂದ ಕಾರು ಉಕ್ಕಿಹರಿಯುವ ಹೊಳೆಗೆ ಬಿದ್ದ ಘಟನೆ ಜು.10 ರಂದು ನಡೆದಿದ್ದು, ಸಿಸಿಟಿವಿಯಲ್ಲಿ ಅವಘಡದ ದೃಶ್ಯ ಸೆರೆಯಾಗಿದೆ.

ಮಂಜೇಶ್ವರ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತ್ತಡ್ಕ ಮಸೀದಿಯ ಸಮೀಪದ ಗೌರಿಹೊಳೆಯಲ್ಲಿ ಮಧ್ಯರಾತ್ರಿ 12 ಗಂಟೆ ಸಮಯಕ್ಕೆ ಅವಘಡ ಸಂಭವಿಸಿದೆ.

ಕಾರು ಪುತ್ತೂರಿನಿಂದ ಕಾಣಿಯೂರು ಕಡೆ ಸಂಚರಿಸುತಿತ್ತು. ಅಪಘಾತಗೊಂಡಲ್ಲಿ ಕಾರಿನ ಬೋನೆಟ್ ನ ಒಂದು ಭಾಗ ಸಿಕ್ಕಿದ್ದು, ಅದು ಮಾರುತಿ 800 ಕಾರು ಆಗಿದೆ.

ಅಪಘಾತದ ವೇಗಕ್ಕೆ ಸೇತುವೆಯ ತಡೆಭೇಲಿಯ ಮೂರು ಕಂಬಗಳು ಮುರಿದು ಕಬ್ಬಿಣ ನೇತಾಡುತ್ತಿದೆ. ಬೆಳ್ಳಂಬೆಳಗ್ಗೆ ಅಪಾರ ಜನ ಸೇರಿ ನದಿಯ ಇಕ್ಕೆಲಗಳಲ್ಲಿ ಹುಡುಕಾಟ ನಡೆಸಿದರೂ ಕಾರು ಪತ್ತೆಯಾಗಿಲ್ಲ. ಕಾರಿನಲ್ಲಿ ಎಷ್ಟು ಜನ ಇದ್ದರೂ, ಕಾರು ಯಾರದ್ದು ಎನ್ನುವ ಮಾಹಿತಿ ಇನ್ನೂ ಗೊತ್ತಾಗಿಲ್ಲ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು