ಕಾಣಿಯೂರು: ಮಧ್ಯರಾತ್ರಿ ಭಾರೀ ವೇಗವಾಗಿ ಬಂದ ಕಾರು ಉಕ್ಕಿಹರಿಯುವ ಹೊಳೆಗೆ ಬಿದ್ದ ಘಟನೆ ಜು.10 ರಂದು ನಡೆದಿದ್ದು, ಸಿಸಿಟಿವಿಯಲ್ಲಿ ಅವಘಡದ ದೃಶ್ಯ ಸೆರೆಯಾಗಿದೆ.
ಮಂಜೇಶ್ವರ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತ್ತಡ್ಕ ಮಸೀದಿಯ ಸಮೀಪದ ಗೌರಿಹೊಳೆಯಲ್ಲಿ ಮಧ್ಯರಾತ್ರಿ 12 ಗಂಟೆ ಸಮಯಕ್ಕೆ ಅವಘಡ ಸಂಭವಿಸಿದೆ.
ಕಾರು ಪುತ್ತೂರಿನಿಂದ ಕಾಣಿಯೂರು ಕಡೆ ಸಂಚರಿಸುತಿತ್ತು. ಅಪಘಾತಗೊಂಡಲ್ಲಿ ಕಾರಿನ ಬೋನೆಟ್ ನ ಒಂದು ಭಾಗ ಸಿಕ್ಕಿದ್ದು, ಅದು ಮಾರುತಿ 800 ಕಾರು ಆಗಿದೆ.
ಅಪಘಾತದ ವೇಗಕ್ಕೆ ಸೇತುವೆಯ ತಡೆಭೇಲಿಯ ಮೂರು ಕಂಬಗಳು ಮುರಿದು ಕಬ್ಬಿಣ ನೇತಾಡುತ್ತಿದೆ. ಬೆಳ್ಳಂಬೆಳಗ್ಗೆ ಅಪಾರ ಜನ ಸೇರಿ ನದಿಯ ಇಕ್ಕೆಲಗಳಲ್ಲಿ ಹುಡುಕಾಟ ನಡೆಸಿದರೂ ಕಾರು ಪತ್ತೆಯಾಗಿಲ್ಲ. ಕಾರಿನಲ್ಲಿ ಎಷ್ಟು ಜನ ಇದ್ದರೂ, ಕಾರು ಯಾರದ್ದು ಎನ್ನುವ ಮಾಹಿತಿ ಇನ್ನೂ ಗೊತ್ತಾಗಿಲ್ಲ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ. ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…
ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್ ಸ್ಲಾಯ್ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್ನಲ್ಲಿ ಅವರು…
ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್ಐಟಿಯವರು ಬಂಧಿಸುತ್ತಿಲ್ಲ. ಎಂದು…
ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…