News Karnataka Kannada
Saturday, May 04 2024
ಮಂಗಳೂರು

ನಾಳೆ ಕರ್ನಾಟಕ ಬಂದ್‌: ಆದ್ರೆ ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಲೆ ಕಾಲೇಜಿಗೆ ರಜೆ ಇಲ್ಲ

Karnataka bandh tomorrow: No holiday for schools, colleges in Udupi, Dakshina Kannada
Photo Credit : News Kannada

ಮಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯಮಟ್ಟದಲ್ಲಿ ಬಂದ್‌ ಗೆ ಕರೆ ನೀಡಿವೆ. ಆದರೆ ಕರಾವಳಿ ಭಾಗದಲ್ಲಿ ಈ ಬಂದ್‌ ಪರಿಣಾಮ ಬೀರುವುದಿಲ್ಲ ಎನ್ನಲಾಗಿದೆ. ಖಾಸಗಿ ಬಸ್ ಮಾಲೀಕರ ಸಂಘದ ಮಾಜಿ ಅಧ್ಯಕ್ಷ ದಿಲ್ ರಾಜ್ ಆಳ್ವ ಹೇಳಿಕೆ ನೀಡಿದ್ದು, ಬಂದ್ ಗೆ ಯಾವುದೇ ರೀತಿಯ ಸಹಕಾರ ನೀಡಲ್ಲ ಎಂದು ಹೇಳಿದ್ದಾರೆ.

ಎತ್ತಿನಹೊಳೆ ಹೋರಾಟಕ್ಕೆ ನಮ್ಮ ಜಿಲ್ಲೆಯವರಿಗೆ ಯಾರು ಬೆಂಬಲ ನೀಡಲಿಲ್ಲ. ತುಳು ಭಾಷೆಯನ್ನ ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿಸುವ ಹೋರಾಟಕ್ಕೂ ಬೆಂಬಲ ನೀಡಲಿಲ್ಲ. ರಾಜ್ಯದ ಬೇರೆ ಭಾಗದ ಯಾವುದೇ ಶಾಸಕರು ,ಜನರು, ಅಥವಾ ಯಾವುದೇ ಕನ್ನಡ ಪರ ಸಂಘಟನೆಗಳು ನಮ್ಮನ್ನು ಬೆಂಬಲಿಸಿಲ್ಲ. ದಕ್ಷಿಣ ಕನ್ನಡ ಉಡುಪಿ ಪರಿಸರ ಪೂರಕವಾಗಿದ್ದ ಜಿಲ್ಲೆ. ಎತ್ತಿನಹೊಳೆ ಯೋಜನೆ ಮೂಲಕ ಪರಿಸರ ನಾಶ ಮಾಡಿದ್ದಾರೆ. ಯಾವುದೇ ಸರಕಾರ ಬಂದರೂ ಆ ಯೋಜನೆಗೆ ಹಣ ಮೀಸಲಿಟ್ಟು ದಕ್ಷಿಣ ಕನ್ನಡ ಜಿಲ್ಲೆಗೆ ಬರೆ ಎಳೆಯುತ್ತಿದ್ದಾರೆ.

ಹಾಗಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕರ್ನಾಟಕ ಬಂದ್ ಗೆ ಯಾವುದೇ ಬೆಂಬಲವಿಲ್ಲ. ಹಾಗಿ ಕಾವೇರಿ ವಿಚಾರದ ಬಂದ್ ಗೂ ನಮ್ಮ ಬೆಂಬಲವಿಲ್ಲ ಎಂದು ಹೇಳಿದ್ದಾರೆ.

ಇನ್ನು ದಕ್ಷಿಣ ಕನ್ನಡದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಮಾಹಿತಿ ನೀಡಿದ್ದಾರೆ. ಅದೇ ರೀತಿ ಉಡುಪಿಯಲ್ಲಿಯೂ ಕೂಡ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು