News Karnataka Kannada
Monday, May 06 2024
ಮಂಗಳೂರು

ಕರ್ನಾಟಕ ರಾಜ್ಯ ಸರಕಾರಿ ನೌಕರರಿಂದ ಮುಷ್ಕರ: ಪುತ್ತೂರಿನಲ್ಲೂ ಬೆಂಬಲ

Karnataka state government employees go on strike demanding fulfilment of various demands, employees in Puttur extend support
Photo Credit : News Kannada

ಪುತ್ತೂರು: ರಾಜ್ಯ ಸರಕಾರಿ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ನೌಕರರು ಹಮ್ಮಿಕೊಂಡ ಪ್ರತಿಭಟನೆಗೆ ಪುತ್ತೂರಿನಲ್ಲೂ ಸಂಪೂರ್ಣ ಬೆಂಬಲ ಸಿಕ್ಕಿದೆ.

ಬುಧವಾರ ಬೆಳಗ್ಗೆಯಿಂದಲೇ ಎಲ್ಲಾ ಸರಕಾರಿ ಇಲಾಖೆಯ ಎ ಯಿಂದ ಡಿ ದರ್ಜೆ ತನಕ್ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಮೌನ ಮುಷ್ಕರದಲ್ಲಿ ತೊಡಗಿಕೊಂಡರು.

ಪ್ರತೀ ಸರಕಾರಿ ಇಲಾಖೆಯಲ್ಲಿ ಕೇವಲ ಹೊರಗುತ್ತಿಗೆ ನೌಕರರನ್ನು ಬಿಟ್ಟರೆ ಖಾಯಂ ನೌಕರರು ಕಾಣ ಸಿಗಲಿಲ್ಲ. ಎಲ್ಲರೂ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ.

ಸಾರ್ವಜನಿಕರು ಹೈರಾಣು:
ಮುಷ್ಕರದ ನೇರ ಬಿಸಿ ತಟ್ಟಿರುವುದು ಸಾಮಾನ್ಯ ಜನರಿಗೆ. ಅನೇಕ ಮಂದಿ ಬುಧವಾರ ಎಂದಿನಂತೆ ಕಚೇರಿ ಕೆಲಸಗಳಿಗಾಗಿ ಬಂದು, ತಾಲೂಕು ಆಡಳಿತ ಸೌಧದ ಎದುರು ಕಾಯುತ್ತಿದ್ದ ದೃಶ್ಯ ಕಂಡುಬಂದಿತು. ಸೌಧ ಮುಂಭಾಗದ ಗಾಜಿನಲ್ಲಿ ಅಂಟಿಸಿದ್ದ ಸೂಚನೆಯನ್ನು ಗಮನಿಸಿ, ಬರಿಗೈಲಿ ವಾಪಾಸು ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಶಾಂತಿಯುತ ಮುಷ್ಕರ ನಮ್ಮದು:
ತಾಲೂಕಿನಲ್ಲಿ ಸುಮಾರು 900 ಕ್ಕೂ ಅಧಿಕ ಎ ಯಿಂದ ಡಿ ದರ್ಜೆ ತನಕದ ಖಾಯಂ ನೌಕರರಿದ್ದು, ಎಲ್ಲಾ ನೌಕರರು ಮುಷ್ಕರಕ್ಕೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ನಮ್ಮದು ಏನಿದ್ದರೂ ಹೋರಾಟ, ಪ್ರತಿಭಟನೆ ಅಲ್ಲ. ಕೇವಲ ಕರ್ತವ್ಯಕ್ಕೆ ಗೈರು ಹಾಜರಾಗಿ ಶಾಂತಿಯುತ ಮುಷ್ಕರ ನಮ್ಮದಾಗಿದೆ. ನಮ್ಮ ಬೇಡಿಕೆ ಈಡೇರುವ ತನಕ ಹೋರಾಟ ಮುಂದುವರಿಯಲಿದೆ.
– ಶಿವಾನಂದ ಆಚಾರ್ಯ, ಅಧ್ಯಕ್ಷರು, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಪುತ್ತೂರು ತಾಲೂಕು ಘಟಕ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು