ಮಂಗಳೂರು: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಟಿಎಂಎ ಪೈ ಸಭಾಂಗಣದಲ್ಲಿ ನಡೆಯಿತು. ಮಲ್ಟಿಕಮೊಡಿಟಿ ಎಕ್ಸ್ ಚೇಂಜ್ ಆಫ್ ಇಂಡಿಯಾ ಲಿಮಿಟೆಡ್ ನ ಅಧ್ಯಕ್ಷ ಡಾ. ಹರ್ಷ್ ಕುಮಾರ್ ಭಾನ್ವಾಲಾ ಮಾತನಾಡಿ ಗ್ರಾಮೀಣ ಭಾಗದಲ್ಲಿ ಜನರಿಗೆ ಕನಿಷ್ಠ ವೆಚ್ಚದಲ್ಲಿ ಆರೋಗ್ಯ ಸೇವೆಗಳ ಅಗತ್ಯವಿದ್ದು ಯುವ ವೈದ್ಯರು ಗ್ರಾಮೀಣ ಭಾಗದ ಸೇವೆಗೆ ಹೆಚ್ಚು ಆಧ್ಯತೆ ನೀಡಬೇಕಾಗಿದೆ. ದೇಶದ ಹಲವು ಗ್ರಾಮೀಣ ಭಾಗಗಳಲ್ಲಿ ವೈದ್ಯರು ಸಾಮೂದಾಯಿಕ ಪರಿವರ್ತಣೆಯ ಕ್ರಾಂತಿ ಮಾಡಿರುವುದು ಅಭಿನಂದನಾರ್ಹವಾಗಿದೆ ಎಂದರು.
ಮಣಿಪಾಲ ಮಾಹೆಯ ಉಪಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಮಾತನಾಡಿ ಕೆಎಂಸಿ ಮಂಗಳೂರು ಸಮೂಹ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದ್ದು ಇನ್ನಷ್ಟು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುವಲ್ಲಿ ಸರ್ವರ ಸಹಕಾರ ಅಗತ್ಯವಿದೆ ಎಂದರು.
ಕೆಎಂಸಿಯ ವಿವಿಧ ವರ್ಷಗಳ ವೈದ್ಯಕೀಯ ವಿದ್ಯಾರ್ಥಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಹಿತಾ ಡಿ.ಅವರಿಗೆ ಅತ್ಯುತ್ತಮ ಔಟ್ ಗೋಯಿಂಗ್ ವಿದ್ಯಾರ್ಥಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಭಾರತೀಯ ಸಾರ್ವಜನಿಕ ಆರೋಗ್ಯ ಪ್ರತಿಷ್ಠಾನದ ಅಧ್ಯಕ್ಷ ಡಾ. ಸಂಜಯ್ ಝೋಡ್ಸೆ,ಸಹ ಉಪಕುಲಪತಿಗಳಾದ ಡಾ.ದಿಲೀಪ್ ಜಿ.ನಾಕ್, ಡಾ.ಶರತ್ ಕೆ.ರಾವ್, ಅಸೋಸಿಯೇಟ್ ಡೀನ್ ಗಳಾದ ಡಾ.ಬಿ.ಸುರೇಶ್ ಕುಮಾರ್ ಶೆಟ್ಟಿ, ಡಾ.ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.
ಕೆಎಂಸಿ ಮಂಗಳೂರು ಡೀನ್ ಡಾ.ಉಣ್ಣಿಕೃಷ್ಣನ್ ಸ್ವಾಗತಿಸಿದರು. ಸಹಾಯಕ ಡೀಣ್ ಡಾ.ಶ್ರೀಕಲಾ ಬಾಳಿಗ ವಂದಿಸಿದರು. ಡಾ.ಗಗನ್ ಬಜಾಜ್ ಮತ್ತು ಡಾ.ಸರಸ್ವತಿ ಶ್ರೀರಾಂ ಕಾರ್ಯಕ್ರಮ ನಿರೂಪಿಸಿದರು.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…