News Karnataka Kannada
Monday, April 29 2024
ಮಂಗಳೂರು

ಅಂಗವೈಕಲ್ಯವನ್ನು ಮೀರಿ ನಿಂತು ಸಾಧನೆ ಗೈದ ಕೌಶಿಕ್

Untitled 1
Photo Credit :

ಮಂಗಳೂರು: ಸಾಧನೆಯ ಹಾದಿಯಲ್ಲಿ ಈ ಹುಡುಗ ಮಿಂಚಿದ್ದಾರೆ. ಅಂಗವೈಕಲ್ಯ ಮೀರಿ ನಿಂತ ಅವರು ಎಸ್ಸೆಸ್ಸೆಲ್ಸಿಯಂತೆ ಪಿಯುಸಿ ಪರೀಕ್ಷೆಯಲ್ಲೂ ಉತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 524 ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಹೊಂದಿದ್ದಾರೆ.

ಹೌದು. ಬಂಟ್ವಾಳದ ಕಂಚಿಕಾರ ಪೇಟೆ ನಿವಾಸಿ, ಮೂಡಬಿದ್ರೆ ಆಳ್ವಾಸ್ ಪಿಯುಸಿ ವಿದ್ಯಾರ್ಥಿ ಕೌಶಿಕ್ ಕಾಲಿನಲ್ಲಿ ಪರೀಕ್ಷೆ ಬರೆದು ಎಸ್ಸೆಸ್ಸೆಲ್ಸಿಯಲ್ಲಿ 424 ಅಂಕ ಗಳಿಸಿದ್ದರು. ಅಂದು ಊರಜನರು ಮತ್ತು ಜನಪ್ರತಿನಿಧಿಗಳು ತೋರಿದ ಪ್ರೀತಿಗೆ ಮನಸೋತಿದ್ದ ಅವರಿಗೆ ಜೀವನ ಪರೀಕ್ಷೆಯನ್ನು ದಿಟ್ಟವಾಗಿ ಎದುರಿಸಲು ಮತ್ತಷ್ಟು ಹುಮ್ಮಸ್ಸು ಬಂದಿತ್ತು. ಅದಕ್ಕೆ ಬೆಂಬಲವಾಗಿ ನಿಂತದ್ದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ. ಉಚಿತ ಶಿಕ್ಷಣ ಯೋಜನೆಯಲ್ಲಿ ಪುಸ್ತಕ, ಕಲಿಕಾ ಸಾಮಗ್ರಿ ಮತ್ತು ಸಮವಸ್ತ್ರ ಒದಗಿಸಿದ ಸಂಸ್ಥೆಗೆ ಕೌಶಿಕ್ ಗೌರವ ತಂದುಕೊಟ್ಟಿದ್ದಾರೆ.  ಕೇವಲ ಕಲಿಕೆಯಲ್ಲಿ ಮಾತ್ರವಲ್ಲದೆ ಪೆನ್ಸಿಲ್ ಸ್ಕೆಚ್ ಕಲಾವಿದರಾಗಿಯೂ ತಮ್ಮ ಕೈಚಳಕವನ್ನು ತೋರಿಸಿದ್ದಾರೆ.

 

ಜನಿಸುವಾಗಲೇ ಕೌಶಿಕ್‌ಗೆ ಕೈಗಳು ಇರಲಿಲ್ಲ. ಬಲಭಾಗದಲ್ಲಿ ಹೆಗಲಿನಿಂದ ಈಚೆ ಕೈಯ ಲಕ್ಷಣವೇ ಇಲ್ಲ, ಎಡಭಾಗದಲ್ಲಿ ಮೊಣಕೈ ವರೆಗೆ ಕೈಯನ್ನು ಹೋಲುವ ರೀತಿಯ ಮಾಂಸ ಜೋತಾಡುತ್ತಿದೆ. ಬೀಡಿ ಕಾರ್ಮಿಕೆ, ಅಮ್ಮ ಜಲಜಾಕ್ಷಿ ಕಾಲುಬೆರಗಳುಗಳ ನಡುವೆ ಬಳಪದ ಕಡ್ಡಿ ಸಿಕ್ಕಿಸಿ ಅಕ್ಷರ ಬರೆಯಲು ಕಲಿಸಿದ್ದರು. ಅದೇ ಅವರ ಮೊದಲ ಪಾಠವಾಗಿತ್ತು. ಬಂಟ್ವಾಳದ ಎಸ್‌ವಿಎಸ್ ಶಾಲೆಯಲ್ಲಿ ಒಂದನೇ ತರಗತಿಯಿಂದ 10ನೇ ತರಗತಿ ವರೆಗೆ ಓದಿದ್ದರು.

ಈತ ಥಿಯರಿಯನ್ನು ತರಗತಿಯಲ್ಲಿ ಗಮನವಿಟ್ಟು ಕೇಳುತ್ತಿದ್ದ. ಮನೆಗೆ ಬಂದು ಪುನರ್ಮನನ ಮಾಡುತ್ತಿದ್ದ. ಗಣಿತ ವಿಷಯದಲ್ಲಿ ಸಮಸ್ಯೆಗಳಿದ್ದರೆ ಕಾಲೇಜಿನಲ್ಲೇ ಪರಿಹಾರ ಕಂಡುಕೊಳ್ಳುತ್ತಿದ್ದ. ನಿತ್ಯ ಬಸ್‌ನಲ್ಲಿ ಒಂದೂವರೆ ತಾಸು ‍ಪಯಣಿಸುವ ತೊಂದರೆಯೊಂದನ್ನು ಬಿಟ್ಟರೆ ಉಳಿದಂತೆ ಯಾವ ಸಮಸ್ಯೆಗಳೂ ಇರಲಿಲ್ಲ. ಹೀಗಾಗಿ ಓದು ಸುಸೂತ್ರವಾಗಿ ಸಾಗಿತು’ ಎಂದು ಕೌಶಿಕ್ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30359
ಶರಣ್‌ ರಾಜ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು