ಕಾವೂರು: ಕಾವೂರು, ಉಲ್ಲಾಸ ನಗರ ನಿವಾಸಿ ಲಲಿತಾರವರ ಮನೆ ತೀವ್ರ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಇಂದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದರು.
ಈ ಸಂದರ್ಭ ಸ್ಥಳದಲ್ಲಿ ಉಪಸ್ಥಿತರಿದ್ದ ಉಪ ತಹಶೀಲ್ದಾರರಲ್ಲಿ ಶೀಘ್ರವೇ ಸೂಕ್ತ ಪರಿಹಾರವನ್ನು ನೀಡುವಂತೆ ತಿಳಿಸಿದರು.