ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸ್ಟ್ಯಾನಿ ಆಲ್ವಾರಿಸ್ ಅವರಿಗೆ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇದರ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷರು, ಕೊಂಕಣಿ ಮಾತೃಭಾಷೆಯ ಸುವರ್ಣ ಮಹೋತ್ಸವ ಆಚರಿಸಿದ ಹಿರಿಯ ಸಂಘಟನೆ ಬಂದು ಸನ್ಮಾನ ಮಾಡುವುದು ಸಂತಸದ ಸಂಗತಿ.ಇಡೀ ಕರ್ನಾಟಕ ವ್ಯಾಪ್ತಿಯ ಕೆಬಿಎಂಕೆಯ ಜೊತೆಗಾರಿಕೆಯು ಹೆಚ್ಚಿನ ಕೊಂಕಣಿ ಕೆಲಸಕ್ಕೆ ಪ್ರೋತ್ಸಾಹವಾಗಲಿದೆ ಎಂದರು.
ಸನ್ಮಾನ ಮಾಡಿ ಮಾತನಾಡಿದ ಕೆಬಿಎಂಕೆ ಅಧ್ಯಕ್ಷ ಕೆ ವಸಂತ ರಾವ್ ,ನಮ್ಮ ಹಿರಿಯರು ಚಳುವಳಿ ಮಾಡಿ ಕೊಂಕಣಿ ಆಕಾಡೆಮಿ ಆಗುವಂತೆ ಮಾಡಿದರು.ನಾವು ಜೊತೆಯಲ್ಲಿ ಸದಾ ಇದ್ದೇವೆ ಎಂದರು.
ಕಾರ್ಯದರ್ಶಿ ರೇಮಂಡ್ ಡಿಕೂನಾ ತಾಕೊಡೆ ಸ್ವಾಗತಿಸಿ ಕೊಂಕಣಿ ಅಕಾಡೆಮಿಯ ನೂತನ ಸದಸ್ಯರು ಆದ ನವೀನ್ ಲೋಬೊ, ಹಾಗೂ ರೊನಿ ಕ್ರಾಸ್ಟಾ ಅವರಿಗೂ ಆಭಿನಂದನೆ ಹೇಳಿದರು.
ಕೆಬಿಎಂಕೆ ಖಜಾಂಚಿ ಸುರೇಶ ಶೆಣೈ, ಸಹಕಾರ್ಯದರ್ಶಿ ಜೂಲಿಯೆಟ್ ಫೆರ್ನಾಂಡೀಸ್, ಕಾರ್ಯಕಾರಿ ಸದಸ್ಯ ಡಾ ಅರವಿಂದ ಶಾನಭಾಗ್ ಇದ್ದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…