News Karnataka Kannada
Monday, April 29 2024
ಮಂಗಳೂರು

ಕೇರಳದಿಂದ ಕರ್ನಾಟಕದಲ್ಲಿ ಶೌಚಾಲಯದ ತ್ಯಾಜ್ಯ ಸುರಿಯಲು ಯತ್ನ: ಲಾರಿ ಚಾಲಕ ಖಾಕಿ ವಶಕ್ಕೆ

Kerala: Truck driver detained for trying to dump toilet waste in Karnataka
Photo Credit : News Kannada

ವಿಟ್ಲ: ಕೇರಳದ ಕಾಸರಗೋಡಿನಿಂದ ಶೌಚಾಲಯದ ತ್ಯಾಜ್ಯ, ಆಸ್ಪತ್ರೆ ತ್ಯಾಜ್ಯವನ್ನು ಕರ್ನಾಟಕ ವಾಹನ ಮೂಲಕ ಕರ್ನಾಟಕಕ್ಕೆ ತಂದು ನಿರ್ಜನ ಪ್ರದೇಶದಲ್ಲಿ ಸುರಿದು ಹೋಗುತ್ತಿರುವ ದಂಧೆಯನ್ನು ಕಲ್ಲಡ್ಕ ಕಾಂಞಂಗಾಡು ಹೆದ್ದಾರಿಯ ಉಕ್ಕುಡದಲ್ಲಿ ಸಾರ್ವಜನಿಕರು ಬುಧವಾರ ಪತ್ತೆ ಹಚ್ಚಿದ್ದಾರೆ.

ಕೆಲವೇ ದಿನಗಳ ಹಿಂದೆ ಕೇಪು ಗ್ರಾಮ ಚೆಲ್ಲಡ್ಕ ಅಮೈ ಮಾರ್ಗದ ಬದಿಯಲ್ಲಿ ಇದೇ ರೀತಿ ತ್ಯಾಜ್ಯವನ್ನು ಸುರಿಯುತ್ತಿದ್ದಾಗ ಸ್ಥಳೀಯರು ಪತ್ತೆ ಹಚ್ಚಿ, ಪಂಚಾಯತ್‌ ವಿಟ್ಲ ಠಾಣೆಗೆ ದೂರು ನೀಡಿದರು.

ಆ ವಾಹನವನ್ನು ಬಿಡಿಸಿಕೊಂಡು ಬಂದು ಈಗ ಮತ್ತೆ ಕಾಸರಗೋಡು ಆಸ್ಪತ್ರೆಯಿಂದ ತ್ಯಾಜ್ಯವನ್ನು ತುಂಬಿ ಕರ್ನಾಟಕ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ವಾಹನವನ್ನು ಬೆನ್ನಟ್ಟಿ ಬಂದಿದ್ದಾರೆನ್ನಲಾಗಿದೆ. ಉಕ್ಕುಡದಲ್ಲಿ ವಾಹನವನ್ನು ಸಾರ್ವಜನಿಕರು ತಡೆಗಟ್ಟಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಶೌಚಾಲಯದ ತ್ಯಾಜ್ಯ ರಸ್ತೆಯುದ್ದಕ್ಕೂ ಸೋರಿಕೆಯಾಗಿ ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಬಾರಿ ತ್ಯಾಜ್ಯವನ್ನು ತಂದಿರುವುದಾಗಿ ಚಾಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ.

ಇನ್ನು ಈ ಎಲ್ಲ ಬೆಳವಣಿಗೆಗೆ ವಿಟ್ಲ ಪೊಲೀಸರ ಕೈವಾಡ ಇದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು