ಮಂಗಳೂರು: ಲೋಕಸಭಾ ಚುನಾವಣೆಯ ತಯಾರಿಯ ಭಾಗವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೊದಲ ಸಮಾವೇಶ ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ನಡೆಯಿತು.
ʼಕೆಂದ್ರದಲ್ಲಿ ನಾವು ಅಧಿಕಾರ ಹಿಡಿದರೆ ಮೊದಲು ಮಾಡುವ ಕೆಲಸ MSP(ಕನಿಷ್ಠ ಬೆಂಬಲ ಬೆಲೆ) ಕಾನೂನು ಜಾರಿಗೆ ತರುವುದು. ಬಿಜೆಪಿ ಅಧಿಕಾರಾವಧಿಯಲ್ಲಿ ರಾಜ್ಯಕ್ಕೆ ಬರಬೇಕಾದಷ್ಟು ದುಡ್ಡು ಬರುತ್ತಿಲ್ಲʼ ಎಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಂದೆ ಬಿಜೆಪಿ ಅಧಿಕಾರದ ಗದ್ದುಗೆ ಏರಿದರೆ ದೇಶದಲ್ಲಿ ಚುನಾವಣೆಗಳು ನಡೆಯದೆ ಸರ್ವಾಧಿಕಾರ ಸ್ಥಾಪನೆಯಾಗುತ್ತದೆ ಎಂದರು.
ಮೋದಿ ಕೊಟ್ಟ ಯಾವುದಾದಾರೂ ಭರವಸೆ ಈಡೇರಿದೆಯೇ ಎಂದು ಪ್ರಶ್ನಿಸಿದ ಖರ್ಗೆ, ನಾವು ಇಂದು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇವೆ. ಮಂಗಳೂರಿನ ಜನ ಬುದ್ಧಿವಂತರು. ಮೋದಿ ಮೋದಿ ಅಂದರೆ ಹೊಟ್ಟೆ ತುಂಬುತ್ತದೆಯೇ ಎಂದು ಕೇಳಿದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ನೆನಪಿಸಿದ ಅವರು, ಇದರಿಂದ ಎಚ್ಚೆತ್ತ ಮೋದಿ ಕೂಡ ಅದೇ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಅವರು ಕೊಡುವ ಯಾವ ಗ್ಯಾರೆಂಟಿಯೂ ಈಡೇರಿಲ್ಲ. ಅಲ್ಲದೆ ಅವರು ಕೊಡುವುದು ಬಿಜೆಪಿಯ ಗ್ಯಾರೆಂಟಿ ಅಲ್ಲ, ಮೋದಿಯ ಗ್ಯಾರೆಂಟಿ ಎಂದರು.
ನೀವು ಈಗ ಓಡಾಡುತ್ತಿರುವ ಸೇತುವೆ ಆಗಿದ್ದು ಕಾಂಗ್ರೆಸ್ ಕಾಲದಲ್ಲಿ. ಉಡುಪಿ ಮಂಗಳೂರಿನಲ್ಲಿ ಹೆಚ್ಚಿನ ಜನರಿಗೆ ಭೂ ಸುಧಾರಣೆ ಕಾಯ್ದೆಯಲ್ಲಿ ಅನುಕೂಲ ಆಗಿದೆಯಾದರೂ ಯಾರೂ ಅದನ್ನು ನೆನಪಿನಲ್ಲಿಟ್ಟುಕೊಳ್ಳದೆ ಭಗವಧ್ವಜ ಹಿಡಿಡು ಓಡಾಡುತ್ತಿದ್ದಾರೆ ಎನ್ನುತ್ತಾ ತಾವು ಮಾಡಿಕೊಟ್ಟ ಅನುಕೂಲಗಳನ್ನು ಜನ ಮರೆತಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…