ಮಂಗಳೂರು: ಮನೆಯ ಅಂಗಳದಲ್ಲಿ ಭಾರೀ ಗಾತ್ರದ ಹೆಬ್ಬಾವನ್ನು ಕಾಳಿಂಗ ಸರ್ಪ ಬೇಟೆಯಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ.
ಕಲ್ಲಾಜೆ ಪ್ರಾಥಮಿಕ ಶಾಲೆಯ ಬಳಿಯ ನಿವಾಸಿ ಕೆ.ಬಾಲಕೃಷ್ಣ ಗೌಡ ಎಂಬವರ ಮನೆಯ ಅಂಗಳದಲ್ಲಿ ಈ ದೃಶ್ಯ ಕಂಡು ಬಂದಿದೆ. 8 ಅಡಿ ಉದ್ದದ ಹೆಬ್ಬಾವನ್ನು ಸುಮಾರು 16 ಅಡಿ ಉದ್ದದ ಕಾಳಿಂಗ ಸರ್ಪ ಬೇಟೆ ಯಾಡಿದೆ. ಕಾಳಿಂಗ ಸರ್ಪದ ಹಿಡಿತದಲ್ಲಿದ್ದ ಹೆಬ್ಬಾವನ್ನು ಸ್ನೆಕ್ ಅಶೋಕ್ ರಕ್ಷಣೆ ಮಾಡಿದ್ದಾರೆ. ಕಾಳಿಂಗ ಸರ್ಪ ಮತ್ತು ಹೆಬ್ಬಾವನ್ನು ಸ್ನೇಕ್ ಅಶೋಕ್ ಲಾಯಿಲ ಸುರಕ್ಷಿತವಾಗಿ ಕಾಡಿಗೆ ಬಿಟ್ಟದ್ದಾರೆ.