Categories: ಮಂಗಳೂರು

ಆರ್‌ಎಸ್‌ಎಸ್‌ ಮುಖಂಡ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ನಿಧನ

ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ, ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ಸದಾ ನಗುಮುಖ ಗಂಭೀರ ವ್ಯಕ್ತಿತ್ವ,ನೇರ ನಡೆ ನುಡಿಯವರಾಗಿದ್ದ ಕಾಂತಪ್ಪ ಶೆಟ್ಟಿಯವರು ಹೃದಯ ವೈಶಾಲ್ಯತೆಯುಳ್ಳವರಾಗಿದ್ದರು. ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ. ರಾ.ಸ್ವ.ಸೇ.ಸಂಘದಲ್ಲಿ ಮಾತ್ರವಲ್ಲ ಭಾರತೀಯ ಜನತಾಪಕ್ಷದಲ್ಲೂ ಗುರುತಿಸಿಕೊಂಡಿದ್ದ ಅವರು ಒಂದುಬಾರಿ ಪುದು ಜಿ.ಪಂ.ಚುನಾವಣೆಗೆ ಸ್ಪರ್ಧಿಸಿ ಸೋಲನ್ನನುಭವಿಸಿದ ಬಳಿಕ ರಾಜಕಾರಣದಿಂದ ದೂರ ಇದ್ದು,ರಾ.ಸ್ವ.ಸೇ. ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೇರಮಜಲು ಗ್ರಾ.ಪಂ.ಅಧ್ಯಕ್ಷರಾಗಿ, ಫರಂಗೀಪೇಟೆ ವ್ಯ.ಸೇ.ಸ.ಸಂಘದ ಅಧ್ಯಕ್ಷರಾಗಿಯೂ ಸುದೀರ್ಘ ಅವಧಿಯ ಕಾಲ ಸೇವೆ ಸಲ್ಲಿಸಿದ್ದರು. ಕೊಡ್ಮಾಣ್ ಶ್ರೀಶಾರದ ಪೂಜಾ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ, ಕೊಡ್ಮಾಣ್ ಪ್ರೌಢಶಾಲಾ ಎಸ್ ಡಿಎಂಸಿ ಸದಸ್ಯರಾಗಿಯು ಹಾಗೂ ವಿವಿಧ ಧಾರ್ಮಿಕ ಕೇಂದ್ರಗಳ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಈ ಹಿಂದೆ ವಿಟ್ಲ ವಿಧಾನಸಭಾ ಕ್ಷೇತ್ರವಿದ್ದಾಗ ಬಿಜೆಪಿ ವಿಟ್ಲ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿದ್ದರು. ಸ್ಥಳೀಯವಾಗಿ ಯುವಕರ ಸಾಮಾಜಿಕ ಚಟುವಟಿಕೆಗೆ ಮಾರ್ಗದರ್ಶಕರು, ಪ್ರೇರಣಾಶಕ್ತಿಯಾಗಿದ್ದರು. ಹವ್ಯಾಸಿ ನಾಟಕ ಕಲಾವಿದರಾಗಿದ್ದ ಕಾಂತಪ್ಪ ಶೆಟ್ಟಿ ಕೆಲ ನಾಟಕಗಳಲ್ಲಿಯ ಬಣ್ಣಹಚ್ಚಿದ್ದರು.

ಸಂಘದಲ್ಲಿ ಕಾಂತಪ್ಪಣ್ಣ ಎಂದೇ ಚಿರಪರಿಚಿತರಾಗಿದ್ದರು. ಅವರು ಪತ್ನಿ ಹಾಗೂ ತಮ್ಮನ ಸಹಿತ ಬಂಧು ಬಳಗವನ್ನು ಅಗಲಿದ್ದಾರೆ.ಇವರ ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ,ಸಂಸದ ನಳಿನ್ ಕುಮಾರ್ ಕಟೀಲ್,ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಹಿತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Gayathri SG

Recent Posts

ಮೇ ತಿಂಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ

ಮೇ ತಿಂಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುಡ್​​ನ್ಯೂಸ್​ವೊಂದನ್ನು ನೀಡಿದೆ.

8 mins ago

ಪ್ರತ್ಯೇಕ ಭಾಗಗಳಲ್ಲಿ ಹುಲಿ ದರ್ಶನ: ನೀರಿನಲ್ಲಿ ವಿಶ್ರಮಿಸುತ್ತಿದ್ದ ಹುಲಿಯನ್ನ ಅಟ್ಟಾಡಿಸಿದ ಆನೆ

ತಾಲೂಕಿನ ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದ ಪ್ರತ್ಯೇಕ ಕಡೆಯಲ್ಲಿ ಹುಲಿ ದರ್ಶನವಾಗಿದೆ, ಇದರಲ್ಲಿ ಆನೆ ಹುಲಿಯನ್ನ ಹಿಮ್ಮೆಟ್ಟಿಸುವ ದೃಶ್ಯ ರೋಚಕವಾಗಿದೆ.

23 mins ago

ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಮತಯಾಚಿಸಿದ್ದಾರೆ; ರಾಗಾ ಕಿಡಿ

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

30 mins ago

ಕಾಂಗ್ರೆಸ್‌‌ಗೆ ಬೆಂಬಲ ಸೂಚಿಸಿ ಬೃಹತ್ ಬಂಜಾರಾ ಸ್ವಾಭಿಮಾನಿ ಸಮಾವೇಶ

ಬಂಜಾರಾ ಸಮುದಾಯದ ಒಗ್ಗಟ್ಟು ನೋಡಿ ಸಂತೋಷವಾಗಿದ್ದು, ನಿಮ್ಮ ಬದುಕನ್ನು ಕಟ್ಟಿಕೊಡುವ ಕೆಲಸ ನಾವು ಮಾಡಿದ್ದೇವೆ ಎಂದು ಬೃಹತ್ ಕೈಗಾರಿಕೆ ಹಾಗೂ…

37 mins ago

ಕುರುಬ ಸಮಾಜದ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆ ಶಿವಕುಮಾರ ನಾಟೀಕಾರಗಿಲ್ಲ

ಕುರುಬ ಸಮಾಜಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿರುವ ಜೆಡಿಎಸ್ ಮುಖಂಡ ಶಿವಕುಮಾರ ನಾಟೀಕಾರಗೆ ಕುರುಬ ಸಮಾಜದ ರಾಜಕಾರಣದ…

54 mins ago

ಕೊರೊನಾ ಸರ್ಟಿಫಿಕೇಟ್​ನಲ್ಲಿ ಪ್ರಧಾನಿ ಮೋದಿ ಫೋಟೋ ದಿಢೀರ್‌ ಮಾಯ !

ಔಷಧಿಗಳ ತಯಾರಿಕಾ Oxford-AstraZeneca ಸಂಸ್ಥೆ ಕೊರೊನಾ ಲಸಿಕೆ ಕೋವಿಶೀಲ್ಡ್ ಬಗ್ಗೆ ಆಘಾತಕಾರಿ ಮಾಹಿತಿಯನ್ನು ಕೋರ್ಟ್​ ಮುಂದೆ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ…

1 hour ago