News Karnataka Kannada
Monday, May 06 2024
ಮಂಗಳೂರು

ಕೆಎಸ್ಎಂಸಿಎ ಬೆಳ್ತಂಗಡಿ – ಉಜಿರೆ ರಬ್ಬರ್ ಸೊಸೈಟಿ ನಿಯೋಗದಿಂದ ಸಚಿವ ಮುನಿರತ್ನ ಭೇಟಿ

Rab
Photo Credit : By Author

ಬೆಳ್ತಂಗಡಿ; ರಬ್ಬರ್ ಬೆಲೆ ಕುಸಿತ ಹಾಗೂ ಇತರ ಸಮಸ್ಯೆಗಳ ಬಗ್ಗೆ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇ ಶನ್ ಮತ್ತು ಉಜಿರೆ ರಬ್ಬರ್ ಸೊಸೈಟಿ ಇದರ ಜಂಟಿ ನಿಯೊ ತ್ವದಲ್ಲಿ ಜ.10 ರಂದು ಬೆಂಗಳೂರಿನಲ್ಲಿ ತೋಟ ಗಾರಿಕೆ ಸಚಿವ ಮುನಿರತ್ನ ಅವರನ್ನು ಬೇಟಿ ಮಾಡಿ ಮಾತುಕತೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ಭೇಟಿಯ ವೇಳೆ, ರಬ್ಬರ್ ಕೃಷಿಕರ ಸಮಸ್ಯೆಯನ್ನು ಎಳೆಎಳೆಯಾಗಿ ಸಚಿವರಿಗೆ ಮನವರಿಕೆ ಮಾಡಲಾಯಿತು. ಅದೂ ಅಲ್ಲದೆ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಬೆಂಬಲ ಬೆಲೆ ಘೋಷಿಸುವಂತೆ ಮನವಿಸಲಾಯಿತು.

ಈ ವೇಳೆ ಪ್ರತಿಕ್ರಿಯಿಸಿದ ಸಚಿವರ, ತಮ್ಮ ಅಹವಾಲಿನ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ನಿಯೋಗದ ನೇತೃತ್ವವನ್ನು ಶಾಸಕ ಹರೀಶ್ ಪೂಂಜಾ ವಹಿಸಿದ್ದರು.

ನಿಯೋಗದಲ್ಲಿ ಕೆ ಎಸ್ ಎಂ ಸಿ ಎ ನಿರ್ದೇಶಕ ಫಾ. ಶಾಜಿ ಮಾತ್ಯು, ಅಧ್ಯಕ್ಷ ಬಿಟ್ಟಿ ನೆಡುನಿಲಂ, ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ಎಂ.ಜೆ,‌ ಪಿಆರ್‌ಒ ಸೆಬಾಸ್ಟಿಯನ್ ಪಿ ಸಿ, ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ‌ ಭಿಡೆ, ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಸಿಇಒ ರಾಜು ಶೆಟ್ಟಿ, ನಿರ್ದೇಶಕ ಹೆಚ್ ಪದ್ಮ ಗೌಡ ಮೊದಲಾದವರು  ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು