ಮಂಗಳೂರು: ಚಾರ್ಮಾಡಿ ಘಾಟಿಯ 9ನೇ ತಿರುವಿನ ಬಳಿ ದಾವಣಗೆರೆ ಕಡೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಮತ್ತು ಉಜಿರೆ ಕಡೆ ಆಗಮಿಸುತ್ತಿದ್ದ ಕಾರ್ ಡಿಕ್ಕಿ ಹೊಡೆದ ಘಟನೆ ಗುರುವಾರ ನಡೆದಿದೆ.
ಕಾರು ಚಾಲಕ ಯಾವುದೇ ರೀತಿಯ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಘಾಟಿ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಂಡು ಬಂತು.ರಜಾ ದಿನವಾದ ಕಾರಣ ವಾಹನ ದಟ್ಟಣೆಯು ಅಧಿಕವಿತ್ತು.