ಮಂಗಳೂರು: ಮಂಗಳೂರಿನ ಪ್ರಸಿದ್ಧ ಕುದ್ರೋಳಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದ ಜಾತ್ರೆಯಲ್ಲಿನ ದೃಶ್ಯವೊಂದು ವೈರಲ್ ಆಗಿದೆ. ಮಟ್ಕಾ ಸೋಡಾ ವ್ಯಾಪಾರಿಗಳು ಜನರ ಆರೋಗ್ಯದ ಜೊತೆ ಆಟ ಆಡುತ್ತಿರುವ ಘಟನೆಯೊಂದು ನಡೆದಿದೆ. ವೈರಲ್ ಆಗಿರುವ ದೃಶ್ಯದಲ್ಲಿ ವ್ಯಕಿಯೊಬ್ಬ ತನ್ನ ಕೊಳಕು ಕೈಗಳಿಂದ ಕಲುಷಿತ ನೀರಿನಲ್ಲಿ ಮಡಕೆಗಳನ್ನು ತೊಳೆದು ಅದರಲ್ಲಿಯೇ ಸೋಡ ಹಾಕಿ ಗ್ರಾಹಕರಿಗೆ ನೀಡಿದ್ದಾರೆ.
ಈ ಮೂಲಕ ಗ್ರಾಹಕರ ಆರೋಗ್ಯದ ಜೊತೆ ಮಟ್ಕಾ ಸೋಡಾ ವ್ಯಾಪಾರಿಗಳು ಆಟ ಆಡುತ್ತಿರುವ ದೃಶ್ಯವೊಂದನ್ನು ಗ್ರಾಹಕರು ಸೆರೆಹಿಡಿದ್ದಾರೆ. ಇದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ವಿಡಿಯೋ ವೈರಲ್ ಬೆನ್ನಲ್ಲೇ ಇಂದು ಪಾಲಿಕೆ ಆರೋಗ್ಯಾಧಿಕಾರಿಗಳ ದಾಳಿ ನಡೆಸಿ ಮಟ್ಕಾ ಸೋಡಾ ಶಾಪ್ ಅನ್ನು ಅಧಿಕಾರಿಗಳು ಸೀಝ್ ಮಾಡಿದ್ದಾರೆ.
ಅಲ್ಲದೆ ಮಟ್ಕಾ ಸೋಡಾ ಪಾಟ್ ಸಹಿತ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಕುದ್ರೋಳಿ ಜಾತ್ರೆಯ ಉಳಿದ ಸ್ಟಾಲ್ ಗಳಲ್ಲೂ ಶುಚಿತ್ವದ ಪರಿಶೀಲನೆ ನಡೆಸಿದ್ದು, ಶುಚಿತ್ವ ಕಾಪಾಡದೇ ಇದ್ದಲ್ಲಿ ಸ್ಟಾಲ್ ಸೀಝ್ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.