News Karnataka Kannada
Monday, April 29 2024
ಮಂಗಳೂರು

ಕೂಳೂರಿನ ಮೇಲ್ಸೇತುವೆ ತಳಭಾಗ ಸುಂದರೀಕರಣ: ಫೆ.9ಕ್ಕೆ ಲೋಕಾರ್ಪಣೆ

Kuloor flyover to be beautified on Feb 9
Photo Credit : News Kannada

ಸುರತ್ಕಲ್: “ಕೂಳೂರಿನ ಮೇಲ್ಸೇತುವೆ ತಳಭಾಗದಲ್ಲಿ ತ್ಯಾಜ್ಯ ರಾಶಿ ಬಿದ್ದು ಸಾರ್ವಜನಿಕರು ಓಡಾಡದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಗಮನಿಸಿದ ನಾವು ನಾಗರಿಕ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ತಂದು 1,100,00 ರೂ. ಖರ್ಚು ಮಾಡಿ ಫ್ಲೈ ಓವರ್ ಕೆಳಗಡೆ ಸುಂದರಗೊಳಿಸುವ ಕೆಲಸಕ್ಕೆ ಚಾಲನೆ ನೀಡಿದೆವು.

ಹಸಿರನ್ನು ಉಳಿಸುವ ನಿಟ್ಟಿನಲ್ಲಿ ನಾಲ್ಕೈದು ವರ್ಷ ಚೆನ್ನಾಗಿ ನೋಡಿಕೊಂಡೆವು. ಆದರೆ ಕೋವಿಡ್ ಸಂದರ್ಭದಲ್ಲಿ ನಿರ್ವಹಣೆ ಕಷ್ಟವಾಯಿತು. ಕೋವಿಡ್ ವೇಳೆ ನಿರಾಶ್ರಿತರಿಗೆ ಸಾಮಾಜಿಕ ಸಂಘಟನೆಗಳು ಆಹಾರದ ಪೊಟ್ಟಣವನ್ನು ವಿತರಿಸಿದ್ದು ಇಲ್ಲಿ ರಾಶಿ ಬಿದ್ದಿತ್ತು. ಅದನ್ನು ಸ್ಥಳೀಯ ಮನಪಾ ಸದಸ್ಯರಿಗೆ ಹೇಳಿ ಸ್ಥಳಾಂತರ ಮಾಡಿದ್ದೇವೆ. ಮತ್ತೆ ಇದಕ್ಕಾಗಿ ಸ್ಥಳೀಯರ ಸಹಕಾರ ಕೋರಿದ್ದು 4 ಲಕ್ಷ ರೂ. ಸಂಗ್ರಹಿಸಲಾಗಿದೆ. 8 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗಿದ್ದು ಬರುವ ಫೆ.9ರಂದು ಸಂಜೆ 4:30ಕ್ಕೆ ಲೋಕಾರ್ಪಣೆಗೊಳಿಸಲಾಗುತ್ತದೆ” ಎಂದು ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗುರುಚಂದ್ರ ಹೆಗ್ಡೆ ಗಂಗಾರಿ ಕೂಳೂರು ಹೇಳಿದರು.

“ಜನರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಈ ಕೆಲಸಕ್ಕೆ ಕೈ ಹಾಕಲಾಗಿದೆ. ಈ ಭಾಗದ ವಿವಿಧ ಬೃಹತ್ ಕೈಗಾರಿಕೆ, ಕಾರ್ಖಾನೆಗಳಿಗೆ ಮನವಿಪತ್ರ ನೀಡಲಾಗಿದ್ದು ಅವರು ಇಲ್ಲಿಯವರೆಗೆ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ಮುಂದಿನ ದಿನಗಳಲ್ಲಿ ಅವರ ಸ್ಪಂದನೆ ದೊರೆತಲ್ಲಿ ಇನ್ನಷ್ಟು ಮೂಲಸೌಕರ್ಯ ಕಾಮಗಾರಿ ನಡೆಸುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಲಿದ್ದೇವೆ” ಎಂದರು.

ಪತ್ರಿಕಾಗೋಷ್ಟಿಯಲ್ಲಿ ಸಮಿತಿ ಅಧ್ಯಕ್ಷ ಗುರುಚಂದ್ರ ಹೆಗ್ಡೆ, ಗೌರವಾಧ್ಯಕ್ಷ ಎಂ. ಎಸ್. ಪುತ್ರನ್, ಕಾರ್ಯದರ್ಶಿ ಗಣೇಶ್ ಶೆಟ್ಟಿ, ಉಪಾಧ್ಯಕ್ಷರಾದ ಮನೋಜ್ ಚಂದ್ರ ಶೆಟ್ಟಿ, ಶ್ರೀನಿವಾಸ್ ಕೂಳೂರು, ಕೋಶಾಧಿಕಾರಿ ಕ್ಲೇವರ್ ಡಿಸೋಜ, ಚಂದ್ರ ಶೆಟ್ಟಿ, ಮನೋಹರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು