News Karnataka Kannada
Saturday, April 27 2024
ಮಂಗಳೂರು

ಹಿಂದು ಸಮಾಜ ಎದುರಿಸುತ್ತಿರುವ ಸವಾಲು ಎದುರಿಸಲು ಸುಬ್ರಹ್ಮಣ್ಯ ಸ್ವಾಮಿ ಶಕ್ತಿ ನೀಡಲಿ: ಪುತ್ತಿಲ

Let Subramanian Swamy give strength to face the challenge faced by Hindu society: Puttila
Photo Credit : News Kannada

ಮೂಲ್ಕಿ: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ಪುತ್ತೂರಿನ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭ ಅರುಣ್ ಕುಮಾರ್ ಪುತ್ತಿಲ ಮಾಧ್ಯಮದೊಂದಿಗೆ ಮಾತನಾಡಿ ಕ್ಷೇತ್ರ ಜೀರ್ಣೋದ್ಧಾರ ಮೂಲಕ ಹಿಂದೂ ಸಮಾಜಕ್ಕೆ ಶಕ್ತಿಯನ್ನು ಕೊಡುವ ಕೆಲಸವಾಗಲಿ. ಈ ಮುಖೇನ ನಾನಾ ಸವಾಲುಗಳನ್ನು ಎದುರಿಸುತ್ತಿರುವ ಹಿಂದೂ ಸಮಾಜಕ್ಕೆ ಉತ್ತರವನ್ನು ಕೊಡುವ ಕೆಲಸ ಸುಬ್ರಹ್ಮಣ್ಯ ಸ್ವಾಮಿ ಅನುಗ್ರಹಿಸಲಿ ಎಂದರು.

ಬಳಿಕ ಅರುಣ್ ಕುಮಾರ್ ಪುತ್ತಿಲರವರು ಸೀದಾ ಧಾರ್ಮಿಕ ಸಭೆ ನಡೆಯುತ್ತಿರುವ ವೇದಿಕೆಗೆ ತೆರಳಿ ಸುಬ್ರಹ್ಮಣ್ಯ ಸ್ವಾಮೀಜಿಯವರ ಬಳಿ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಕಾರ್ಯಕರ್ತರ ಘೋಷಣೆ ಮುಗಿಲು ಮುಟ್ಟಿತು.

ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರಲ್ಲಿ ರೋಮಾಂಚನಗೊಂಡು ನಾಯಕನನ್ನು ಭರ್ಜರಿಯಾಗಿ ಸ್ವಾಗತಿಸುವ ಮೂಲಕ ಸಂಘಟನೆಯನ್ನು ಮೂಲೆಗುಂಪು ಮಾಡುತ್ತಿರುವ ಕೆಲ ಹಿರಿಯ ಸಂಘಟನೆಯ ನಾಯಕರಿಗೆ ಹಾಗೂ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಿಗೆ ತಿರುಗೇಟು ನೀಡಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಬಿಜೆಪಿ ಪಕ್ಷಕ್ಕೆ ಬಿಸಿ ಮುಟ್ಟಿಸಿದ ಅರುಣ್ ಕುಮಾರ್ ಪುತ್ತಿಲ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು