News Karnataka Kannada
Saturday, April 27 2024
ಮಂಗಳೂರು

ಸರಕಾರಿ ಕಾಲೇಜಿನ ಗ್ರಂಥಪಾಲಕರಿಂದ ರಾಜಕೀಯ ಪಕ್ಷವೊಂದರ ಪ್ರಚಾರ ಆರೋಪ, ಕ್ರಮ ಕೈಗೊಳ್ಳುವಂತೆ ಮನವಿ

Librarian of a government college in Puttur accused of promoting a political party
Photo Credit : News Kannada

ಪುತ್ತೂರು: ರಾಜಕೀಯ ಪಕ್ಷವೊಂದರ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿರುವ ಸರಕಾರಿ ಕಾಲೇಜುವೊಂದರ ಗ್ರಂಥಪಾಲಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪುತ್ತೂರು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲರಿಗೆ ಮನವಿ ಮಾಡಲಾಗಿದೆ. ಶಿಸ್ತು ಕ್ರಮ ಕೈಗೊಳ್ಳದಿದ್ದಲ್ಲಿ ಕಾಲೇಜು ಮುಂದೆ ಪ್ರತಿಭಟನೆ ಮಾಡುವುದಾಗಿ ಎನ್‌ಎಸ್‌ಯುಐ ನಿಯೋಗ ಎಚ್ಚರಿಕೆ ನೀಡಿದೆ.

ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಗ್ರಂಥಪಾಲಕ ಪ್ರವೀಣ್ ವಗ್ಗ ಅವರು ಸರಕಾರಿ ನೌಕರರಾಗಿ ಒಂದು ರಾಜಕೀಯ ಪಕ್ಷದ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದು ಸರಿಯಲ್ಲ. ಒಬ್ಬ ಸರಕಾರಿ ನೌಕರ ಯಾವುದೇ ರಾಜಕೀಯ ಪಕ್ಷದ ಪರ ಇರುವಂತಿಲ್ಲ. ಆದರೆ ಕಾಲೇಜಿನಲ್ಲಿ ಈ ಅಧ್ಯಾಪಕರು ರಾಜಕೀಯ ಪಕ್ಷವೊಂದರ ಪರ ಪ್ರಚಾರ ನಡೆಸುವುದು ತಪ್ಪು. ಈ ನಿಟ್ಟಿನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಎನ್‌ಎಸ್‌ಯುಐ ಮನವಿ ಮಾಡಿದೆ. ಘಟನೆ ಕುರಿತು ಶಿಸ್ತು ಕ್ರಮ ಕೈಗೊಳ್ಳದಿದ್ದಲ್ಲಿ ಕಾಲೇಜು ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆಯನ್ನು ಎನ್‌ಎಸ್‌ಯುಐ ನಿಯೋಗ ನೀಡಿದೆ.

ಈ ಸಂದರ್ಭದಲ್ಲಿ ಎನ್.ಎಸ್‌ಯು.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾತಿಶ ಅಳಕೆಮಜಲು, ಅಡ್ವರ್ಡ್ ಡಿಸೋಜ, ಗಗನ್‌ದೀಪ್, ನವೀನ್ ಬನ್ನೂರು, ಆಸ್ಟಿನ್ ನಿಯೋಗದಲ್ಲಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು