Categories: ಮಂಗಳೂರು

ಸರಕಾರಿ ಕಾಲೇಜಿನ ಗ್ರಂಥಪಾಲಕರಿಂದ ರಾಜಕೀಯ ಪಕ್ಷವೊಂದರ ಪ್ರಚಾರ ಆರೋಪ, ಕ್ರಮ ಕೈಗೊಳ್ಳುವಂತೆ ಮನವಿ

ಪುತ್ತೂರು: ರಾಜಕೀಯ ಪಕ್ಷವೊಂದರ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿರುವ ಸರಕಾರಿ ಕಾಲೇಜುವೊಂದರ ಗ್ರಂಥಪಾಲಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪುತ್ತೂರು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲರಿಗೆ ಮನವಿ ಮಾಡಲಾಗಿದೆ. ಶಿಸ್ತು ಕ್ರಮ ಕೈಗೊಳ್ಳದಿದ್ದಲ್ಲಿ ಕಾಲೇಜು ಮುಂದೆ ಪ್ರತಿಭಟನೆ ಮಾಡುವುದಾಗಿ ಎನ್‌ಎಸ್‌ಯುಐ ನಿಯೋಗ ಎಚ್ಚರಿಕೆ ನೀಡಿದೆ.

ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಗ್ರಂಥಪಾಲಕ ಪ್ರವೀಣ್ ವಗ್ಗ ಅವರು ಸರಕಾರಿ ನೌಕರರಾಗಿ ಒಂದು ರಾಜಕೀಯ ಪಕ್ಷದ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದು ಸರಿಯಲ್ಲ. ಒಬ್ಬ ಸರಕಾರಿ ನೌಕರ ಯಾವುದೇ ರಾಜಕೀಯ ಪಕ್ಷದ ಪರ ಇರುವಂತಿಲ್ಲ. ಆದರೆ ಕಾಲೇಜಿನಲ್ಲಿ ಈ ಅಧ್ಯಾಪಕರು ರಾಜಕೀಯ ಪಕ್ಷವೊಂದರ ಪರ ಪ್ರಚಾರ ನಡೆಸುವುದು ತಪ್ಪು. ಈ ನಿಟ್ಟಿನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಎನ್‌ಎಸ್‌ಯುಐ ಮನವಿ ಮಾಡಿದೆ. ಘಟನೆ ಕುರಿತು ಶಿಸ್ತು ಕ್ರಮ ಕೈಗೊಳ್ಳದಿದ್ದಲ್ಲಿ ಕಾಲೇಜು ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆಯನ್ನು ಎನ್‌ಎಸ್‌ಯುಐ ನಿಯೋಗ ನೀಡಿದೆ.

ಈ ಸಂದರ್ಭದಲ್ಲಿ ಎನ್.ಎಸ್‌ಯು.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾತಿಶ ಅಳಕೆಮಜಲು, ಅಡ್ವರ್ಡ್ ಡಿಸೋಜ, ಗಗನ್‌ದೀಪ್, ನವೀನ್ ಬನ್ನೂರು, ಆಸ್ಟಿನ್ ನಿಯೋಗದಲ್ಲಿದ್ದರು.

Gayathri SG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

39 mins ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

44 mins ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

58 mins ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

1 hour ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

2 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

2 hours ago