ಮಂಗಳೂರು

ರಸ್ತೆ ಸುರಕ್ಷತೆಗೆ ಲಯನ್ಸ್ ಕ್ಲಬ್ ಕಾವೂರು ನೆರವು ಶ್ಲಾಘನೀಯ: ಕುಡ್ಪಿ ಅರವಿಂದ್ ಶೆಣೈ

ಮಂಗಳೂರು: ವಾಮಂಜುರಿನ ನಿರಾಳ, ತಾರಿಗುಡ್ಡೆ, ಕೆಲರೈ, ನೀರ್ ಮಾರ್ಗ ರಸ್ತೆಯಲ್ಲಿ ಅಪಾಯಕಾರಿ ತಿರುವುಗಳಿರುವುದರಿಂದ ಲಯನ್ಸ್ ಕ್ಲಬ್ ಮಂಗಳೂರು ಕಾವೂರು ವತಿಯಿಂದ ಸುಮಾರು 20 ಸಾವಿರ ರೂಪಾಯಿಯ 4 ಟ್ರಾಫಿಕ್ ಕಾನ್ವೆಕ್ಸ್ ಮಿರರ್ ಗಳನ್ನು ಅಳವಡಿಸಲಾಯಿತು.

ಈ ಸಂದರ್ಭದಲ್ಲಿ , ದ್ವಿತೀಯ ಉಪ ಗವರ್ನರ್‌ ಲಯನ್ ಕುಡ್ಪಿ ಅರವಿಂದ ಶೆಣೈ ಯವರು ಮಾತನಾಡಿ ಗ್ರಾಮೀಣ ಪ್ರದೇಶದ ಅಪಾಯಕಾರಿ ತಿರುವುಗಳಲ್ಲಿ ಅಪಘಾತಗಳ ತಪ್ಪಿಸುವ ಸಲುವಾಗಿ ಕನ್ವೆಕ್ಸ್ ಮಿರರ್ ಗಳನ್ನು ಅಳವಡಿಸಿರುವುದು ನಿಜಕ್ಕೂ ಶ್ಲಾಘನೀಯ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಮೂಡಿ ಬರಲಿ ಎಂದರು.

ಪ್ರಾಂತ್ಯ 11 ರ ಪ್ರಾಂತ್ಯ ಅಧ್ಯಕ್ಷರಾದ ಲಯನ್ ಶೇಖರ್ ಪೂಜಾರಿ, ವಲಯ ಅಧ್ಯಕ್ಷರಾದ ಲಯನ್ ಸುಧೀರ್ ಕುಮಾರ್, ಲಯನ್ಸ್ ಕ್ಲಬ್ ಕಾವ್ ಅಧ್ಯಕ್ಷರಾದ ಲಯನ್ ವಿಕ್ಟರ್ ಮೊರಸ್, ಸಂಗಮ ಕಾರ್ಡಿ ನೇಟರ್ ಲಯನ್ ಮೋಹನದಾಸ್ ಶೆಟ್ಟಿ, ಕಾರ್ಯದರ್ಶಿ ಅಶ್ವಿನ್ ಕುಮಾರ್, ಖಜಾಂಜಿ ರಾಕೇಶ್ ಶೆಟ್ಟಿ, ಮಾಜಿ ರೀಜನ್ ಪರ್ಸನ್ ಸ್ವರೂಪ ಶೆಟ್ಟಿ, ಶ್ರೀಧರ್ ನಾಯಕ್, ಹಾಗೂ ರೇಷ್ಮಾ ಮೊರಾಸ್ ಉಪಸ್ಥಿತರಿದ್ದರು. ಲಯನ್ ಮೋಹನದಾಸ್ ಶೆಟ್ಟಿ ಅವರು ಸ್ವಾಗತಿಸಿದರು.

Ashika S

Recent Posts

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

13 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

20 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

22 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

31 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

46 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

59 mins ago