Categories: ಮಂಗಳೂರು

ಲೋಕಸಭಾ ಚುನಾವಣೆ: ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ ಜಿಲ್ಲೆಯ ಸೌಜನ್ಯ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದ್ದು, ಹೋರಾಟಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟನ್ನನವರು  ತಿಳಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಿದ ಅವರು, ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಪ್ರಕರಣ ಮಾತ್ರವಲ್ಲ ಅದಕ್ಕಿಂತಲೂ ಹಿಂದೆ ನಡೆದ ಆನೆ ಮಾವುತ ಪ್ರಕರಣ, ಪದ್ಮಾವತಿ ಕೊಲೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ನಡೆದ ಎಲ್ಲಾ ಹೆಣ್ಣು ಮಕ್ಕಳ ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಿರುವುದಾಗಿ ಹೇಳಿದರು.

ನೋಟ ಬಗ್ಗೆ ಜನ ಜಾಗೃತಿ ಅಗತ್ಯವಿದೆ ಎಂದು ನ್ಯಾಯಾಲಯವೇ ಹೇಳಿದೆ. ಚುನಾವಣಾ ಆಯೋಗವೂ ನಮ್ಮ ಈ ಅಭಿಯಾನಕ್ಕೆ ಸಹಕಾರ ನೀಡುವ ಜೊತೆ ಹೆಣ್ಣು ಮಕ್ಕಳ ಬಗ್ಗೆ ಪ್ರಾಧಾನ್ಯತೆ ನೀಡುವ ಈ ಅಭಿಯಾನಕ್ಕೆ ಜನರು ಸಹಕಾರ ನೀಡಬೇಕು ಎಂದರು.

ಚುನಾವಣೆ ಹಿನ್ನೆಲೆ ಯಲ್ಲಿ 50 ಸಾವಿರಕ್ಕಿಂತ ಹೆಚ್ಚಿನ ಹಣ ಸಾಗಿಸಲು ನಿರ್ಭಂದ ಇದೆ. ಆದರೆ ಸಂಘದ ಹೆಸರಿನಲ್ಲಿ ಬಡ್ಡಿ ದಂಧೆಯಲ್ಲಿ ಸಂಗ್ರಹಿಸಿದ ಅಕ್ರಮ ಲಕ್ಷಗಟ್ಟಲೆ ಹಣ ಶುಕ್ರವಾರ, ಶನಿವಾರ ಯಾವುದೇ ಭಯವಿಲ್ಲದೇ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಗಿರೀಶ್ ಮಟ್ಟನ್ನ ನವರ್ , ಚುನಾವಣಾ ಆಯೋಗ ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ದ. ಕ ಹಾಗೂ ಉಡುಪಿಯ ಕರಾವಳಿ ಭಾಗದಲ್ಲಿ ಈ ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ. 24ರಂದು ನೋಟ ಜನಜಾಗೃತಿ ಸಭೆ ನಡೆಸುತ್ತಿ ರುವುದಾಗಿ ಪ್ರಸನ್ನ ರವಿ ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ ತಮ್ಮಣ್ಣ ಶೆಟ್ಟಿ, ಜಯನ್ ಉಪಸ್ಥಿತರಿದ್ದರು.

Chaitra Kulal

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago