Categories: ಮಂಗಳೂರು

ಪ್ರೇಮ ವೈಫಲ್ಯ: ಮನನೊಂದ ಯುವಕ ನೇಣಿಗೆ ಶರಣು

ಬಂಟ್ವಾಳ: ಪ್ರೇಮ ವೈಫಲ್ಯ ಕಂಡ ಕಾರಣಕ್ಕಾಗಿ ಮಾನಸಿಕವಾಗಿ ನೊಂದುಕೊಂಡ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ.

‌‌ಕಡೇಶಿವಾಲಯ ಗ್ರಾಮದ ನೆಲ್ಲಿ ಗುಡ್ಡೆ ನಿವಾಸಿ ದಿ.ಸುಂದರ ಎಂಬವರ ಮಗ ಸಚಿನ್ (24) ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಸಚಿನ್ ಬಂಟ್ವಾಳದ ಲೆವಿನ್ ಇಲೆಕ್ಟ್ರಿಕಲ್ ಕಂಪೆನಿಯಲ್ಲಿ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಅ.18 ರಂದು ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬರದ ಹಿನ್ನೆಲೆಯಲ್ಲಿ ಈತನನ್ನು ಹುಡುಕಲು ಶುರು ಮಾಡಿದ್ದರು.

ಪೋನ್ ಮಾಡಿದಾಗ ರಿಂಗ್ ಆಗುತ್ತಿತ್ತೇ ವಿನಹ ರಿಸೀವ್ ಮಾಡದೆ ಇರುವಾಗ ಬಂಟ್ವಾಳದ ಕಾಮಾಜೆ ಮಾವನ ಮನೆಯರವಲ್ಲಿ ವಿಚಾರಿಸಿದ್ದಾರೆ. ಅವರು ಹುಡುಕಿದಾಗ ಮುಂಜಾನೆ ಸುಮಾರು 3 ಗಂಟೆಯ ವೇಳೆ ಈತನ ಸ್ಕೂಟರ್ ಬಿ.ಮೂಡ ಗ್ರಾಮದ ಮಿತ್ತಕೋಡಿ ಎಂಬಲ್ಲಿರುವ ಮೈದಾನದ ಬಳಿ ನಿಲ್ಲಿಸಲಾಗಿತ್ತು.

ಆದರೆ ಸಚಿನ್ ಅಲ್ಲಿ ಕಾಣದ ಹಿನ್ನೆಲೆಯಲ್ಲಿ ಪೋನ್ ಮಾಡಿದಾಗ ಅಲ್ಲೇ ಸಮೀಪದ ಗುಡ್ಡವೊಂದರಲ್ಲಿ ಪೋನ್ ರಿಂಗು ಕೇಳುತ್ತಿತ್ತು. ಹಾಗಾಗಿ ಅಲ್ಲಿಗೆ ಹೋಗಿ ನೋಡಿದಾಗ ಆತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.

ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದು, ಇದೀಗ ಚೀಟಿ ಪೋಲೀಸರ ಕೈ ಸೇರಿದೆ. ಪ್ರೇಮ ವೈಫಲ್ಯ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಈತ ಚೀಟಿಯಲ್ಲಿ ಬರೆದಿದ್ದ ಎಂದು ಹೇಳಲಾಗಿದ್ದು, ಮರಣೋತ್ತರ ಪರೀಕ್ಷಾ ವರದಿಯ ಬಳಿಕ ಪೋಲೀಸ್ ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿದೆ.

ನಗರ ಠಾಣಾ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಮತ್ತು ಎಸ್. ಐ.ರಾಮಕೃಷ್ಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

6 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

6 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

8 hours ago