ಹುಬ್ಬಳ್ಳಿ : ವಿಧಾನಸಭಾ ಚುನಾವಣೆಯ ಅಂಗವಾಗಿ ಹುಬ್ಬಳ್ಳಿಯ ಪಾಟೀದಾರ ಪಟೇಲ್ ಸಮಾಜದ ಬಾಂಧವರೊಂದಿಗೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಮಹೇಶ ಟೆಂಗಿನಕಾಯಿ ಸಭೆ ನಡೆಸಿದರು.
ಇನ್ನೂ ಸಭೆಯನ್ನು ಉದ್ದೇಶಿಸಿ ಮಾತನಾಡಿದ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಾಧನೆಗಳ ಕುರಿತು ಪ್ರಸ್ತಾಪಿಸಿ, ರಾಷ್ಟ್ರ ನಿರ್ಮಾಣದ ಕಾರ್ಯಕ್ಕಾಗಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ರಾಜಣ್ಣಕೊರವಿ, ತಿಪ್ಪಣ್ಣ ಮಜ್ಜಗಿ, ಸಮಾಜದ ಅಧ್ಯಕ್ಷರಾದ ಭೀಮಸೀಭಾಯಿ ಪಟೇಲ, ಪ್ರಧಾನ ಕಾರ್ಯದರ್ಶಿಗಳಾದ ಶಾಂತಿಬಾಯಿ ಪಟೇಲ, ಪ್ರಮುಖರಾದ ತುಳಸಿಬಾಯಿ ಪಟೇಲ, ರಾಜೇಶ ಪಟೇಲ, ಕಿಶ ಪಟೇಲ ಹಾಗೂ ಇತರರು ಉಪಸ್ಥಿತರಿದ್ದರು.