ಮಂಗಳೂರು: ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಕೋರ್ಟ್ ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿದೆ.
ಮಂಗಳೂರು ತಾಲೂಕಿನ ಮಳಲಿಪೇಟೆ ಮಸೀದಿ ನವೀಕರಣದ ಸಂದರ್ಭ ಸ್ಥಳೀಯರಾದ ಧನಂಜಯ ಮತ್ತಿತರ ಐವರು ಮಸೀದಿಯು ಹಿಂದೂ ದೇವಾಲಯವಿದ್ದಂತಿದೆ. ಈ ಸಂಬಂಧ ತನಿಖೆ ನಡೆಸಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.
ಈ ಕುರಿತು ಮಸೀದಿ ಪರ ವಾದ ಮಂಡಿಸಿದ ವಕೀಲರು, ಮಸೀದಿ ವಕ್ಫ್ ಆಸ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ವಕ್ಫ್ ಸಂಬಂಧಿತ ನ್ಯಾಯಾಲಯದ ಪರಿಧಿಗೆ ಬರುತ್ತದೆ. ಹಾಗಾಗಿ ಮಸೀದಿ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕೆಂದು ವಾದಿಸಿದ್ದರು.
ಈ ಕುರಿತು ವಾದ ಆಲಿಸಿದ್ದ ನ್ಯಾಯಾಲಯ ಸೆಪ್ಟೆಂಬರ್ 27ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು. ಆದರೆ, ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿಸಿದೆ.