ಬೆಳ್ತಂಗಡಿ : ಮರ ಕಡಿಯುವ ವೇಳೆ ಕಟ್ಟಿಂಗ್ ಮೆಷಿನ್ ಕೈ ತಪ್ಪಿ ಬಿದ್ದು ಗರಗಸ ಕುತ್ತಿಗೆಗೆ ತಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ಡಿ. 20 ರಂದು ನಡೆದಿದೆ.
ಮೃತರು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ (46) ಎಂದು ತಿಳಿದು ಬಂದಿದೆ.
ಮನೆಗೆ ಕಟ್ಟಿಗೆ ಮಾಡುವ ಸಲುವಾಗಿ ಪ್ರಶಾಂತ್ ಅವರು ಸಹೋದರ ಪ್ರಮೋದ್ ಜೊತೆ ಡಿ.19 ರಂದು ಬೆಳಗ್ಗೆ ಕಟ್ಟಿಂಗ್ ಮಿಷಿನ್ ಮೂಲಕ ಮರ ಕಡಿಯುತ್ತಿದ್ದರು. ಈ ವೇಳೆ ಮಿಷಿನ್ ಜೊತೆಗೆ ಪ್ರಶಾಂತ್ ಹಿಡಿತ ತಪ್ಪಿ ಕೆಳಕ್ಕೆ ಬಿದ್ದಿದ್ದು ಚಲನೆ ಸ್ಥಿತಿಯಲ್ಲಿ ಮಿಷಿನ್ ನ ಗರಗಸ ಆಕಸ್ಮಿಕವಾಗಿ ಕುತ್ತಿಗೆಗೆ ತಾಗಿ ಗಂಭೀರ ಗಾಯವಾಗಿತ್ತು.
ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ಧಾರೆ. ಈ ಕುರಿತು ಸಹೋದರ ಪ್ರಮೋದ್ ವೇಣೂರು ಠಾಣೆಯಲ್ಲಿ ದೂರು ನೀಡಿದ್ದಾರೆ.