ಮಂಗಳೂರು: ಕೇರಳ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್ ಮಹಾಮಾರಿ ದಿನದಿಂದ ದಿನಕ್ಕೆ ಎಲ್ಲೆ ಮೀರುತ್ತಿದೆ. ಮಂಗಳೂರಿನಲ್ಲಿಯೂ ಕರೊನಾ ಅಬ್ಬರ ಹೆಚ್ಚಾಗಿದೆ.
ಅದೇ ರೀತಿ ಮಂಗಳೂರಿನಲ್ಲಿ ಶಂಕಿತ ಕೋವಿಡ್ ಪಾಸಿಟಿವ್ ಆಗಿದ್ದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ಮೂಲತಃ ಉತ್ತರ ಪ್ರದೇಶದ ವಲಸೆ ಕಾರ್ಮಿಕನೋರ್ವ ಉಸಿರಾಟ ತೊಂದರೆಯಿಂದ ಎರಡು ದಿನಗಳ ಹಿಂದೆ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವ್ಯಕ್ತಿ ಡಯಾಬಿಟಿಸ್, ಮದ್ಯ ಸೇವನೆ ಚಟ ಹೊಂದಿದ್ದು, ಕೋವಿಡ್ ನಿಂದಲೇ ಸಾವು ಸಂಭವಿಸಿದೆಯೇ ಎಂದು ದೃಢಪಡಿಸಬೇಕಿದೆ ಎಂದು ಹೇಳಿದ್ದಾರೆ.