ಮಂಗಳೂರು: ಡಿ.12ರಂದು ಮಂಗಳಾ ಈಜುಕೊಳದಲ್ಲಿ ಮುಳುಗಿ ಹರ್ಯಾಣ ಮೂಲದ 30 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಮೃತರನ್ನು ಹರಿಯಾಣದ ಗುರ್ಗಾಂವ್ ಮೂಲದ ವಿನೋದ್ ಕುಮಾರ್ ಶಾ ಅವರ ಪುತ್ರ ಅಭಿಷೇಕ್ ಆನಂದ್ ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಈಜುಕೊಳದ ಸಿಬ್ಬಂದಿ ಆನಂದ ಅವರನ್ನು ವೆನ್ಲಾಕ್ ಆಸ್ಪತ್ರೆ ದಾಖಲಿಸಿದ್ದು, ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಸಾವಿನ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.